ಸಂಸತ್ತು ಕಾಯ್ದೆ ಮೂಲಕ ರಾಮ ಮಂದಿನವನ್ನು ನಿರ್ಮಾಣ ಮಾಡಲಾಗುತ್ತದೆ, ಕೈಗೆಟುವ ದರದಲ್ಲಿ ಎಲ್ಲರಿಗೂ ಶಿಕ್ಷಣ ಹಾಗೂ ಕೋಟ್ಯಾಂತರ ಯುವಕರಿಗೆ ಉದ್ಯೋಗ ಒದಗಿಸಿಕೊಡಲಾಗುತ್ತದೆ, ಪೆಟ್ರೋಲ್ ಬೆಲೆ ಅಗ್ಗವಾಗುತ್ತದೆ, ರೈತರ ಸಾಲ ಮನ್ನಾ ಆಗುತ್ತದೆ ಎಂದು ನಿರೀಕ್ಷಿಸಿದ್ದೆವು. ಆದರೆ, ಮೋದಿ ಸರ್ಕಾರ ನಮ್ಮೆಲ್ಲಾ ನಿರೀಕ್ಷೆಗಳನ್ನೂ ಹುಸಿಯಾಗಿಸಿದೆ. ಇದೀಗ ರಾಮನನ್ನೇ ಮರೆತಿರುವ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ಕುರಿತಂತೆ ಮುಸ್ಲಿಂ ಮಹಿಳೆಯರ ಪರ ವಕೀಲರಾಗಿ ಹೋಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.