ಮಗನ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದ ಲ್ಯಾನ್ಸ್ ನಾಯಕ್ ಮುಖ್ತಾರ್ ಅಹಮದ್ ಮಲಿಕ್ ಹತ್ಯೆ ಬೆನ್ನಲ್ಲೇ ಕಾಶ್ಮೀರಿ ಯುವಕರಿಗೆ ಹಿಜ್ಬುಲ್ ಮುಜಾಹಿದ್ದೀನ್ ಎಚ್ಚರಿಕೆ ನೀಡಿದ್ದು, ಭಾರತೀಯ ಸೇನೆ ಹಾಗೂ ಪೊಲೀಸ್ ಇಲಾಖೆ, ಇತರೆ ಭದ್ರತಾ ಪಡೆ, ಸರ್ಕಾರಿ ಉದ್ಯೋಗಗಳಲ್ಲಿರುವ ಕಾಶ್ಮೀರಿ ಯುವಕರು ಕೂಡಲೇ ತಮ್ಮ ಕೆಲಸ ತ್ಯಜಿಸಬೇಕು ಎಂದು ಹೇಳಿದೆ. ಇಲ್ಲವಾದಲ್ಲಿ ನಾಲ್ಕು ದಿನಗಳಲ್ಲಿ ಸಾಯಲು ಸಿದ್ಧರಾಗಿ ಎಂದು ಎಚ್ಚರಿಕೆ ನೀಡಿದೆ.