ರಾಜಸ್ತಾನ ಚುನಾವಣೆ; ಬಿಜೆಪಿಗೆ ತೀವ್ರ ಹಿನ್ನಡೆ, ಪಕ್ಷ ತೊರೆದ ಜಸ್ವಂತ್ ಸಿಂಗ್ ಪುತ್ರ ಮನ್ವೆಂದ್ರ!

ರಾಜಸ್ತಾನ ಚುನಾವಣೆಗೂ ಮುನ್ನ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದ್ದು ಪಕ್ಷದ ಹಿರಿಯ ಮುಖಂಡ ಜಸ್ವಂತ್ ಸಿಂಗ್ ಪುತ್ರ ಮನ್ವೆಂದ್ರ ಸಿಂಗ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ...
ಮನ್ವೆಂದ್ರ ಸಿಂಗ್
ಮನ್ವೆಂದ್ರ ಸಿಂಗ್
Updated on
ಬರ್ಮೆರಾ(ರಾಜಸ್ತಾನ್): ರಾಜಸ್ತಾನ ಚುನಾವಣೆಗೂ ಮುನ್ನ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದ್ದು ಪಕ್ಷದ ಹಿರಿಯ ಮುಖಂಡ ಜಸ್ವಂತ್ ಸಿಂಗ್ ಪುತ್ರ ಮನ್ವೆಂದ್ರ ಸಿಂಗ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. 
ಬಿಜೆಪಿ ತೊರೆದಿರುವ ಮನ್ವೆಂದ್ರ ಸಿಂಗ್ ತಾವು ಕಮಲ ಹಿಡಿದು ದೊಡ್ಡ ತಪ್ಪು ಮಾಡಿದ್ದೇನೆ. ನನಗೆ ಗೌರವ ಕೊಡದ ಪಕ್ಷದಲ್ಲಿ ನಾನು ಇರಲಾರೆ ಎಂದು ರಾಜಸ್ತಾನದ ಬರ್ಮೆರಾದ ಸ್ವಾಭಿಮಾನ್ ರ್ಯಾಲಿಯಲ್ಲಿ ಶಾಸಕ ಮನ್ವೆಂದ್ರ ಸಿಂಗ್ ಹೇಳಿದ್ದಾರೆ. 
2014ರ ಲೋಕಸಭೆ ಚುನಾವಣೆಯಲ್ಲಿ ತಂದೆ ಜಸ್ವಂತ್ ಸಿಂಗ್ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಣೆ ಮಾಡಿತ್ತು. ಅಂದಿನಿಂದ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದ ಮನ್ವೆಂದ್ರ ಸಿಂಗ್ ಇಂದು ಪಕ್ಷವನ್ನು ತೊರೆದಿದ್ದಾರೆ. 
ಜಸ್ವಂತ್ ಸಿಂಗ್ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಕರೆ ಮಾಡಿ ಜಸ್ವಂತ್ ಸಿಂಗ್ ಅವರಿಗೆ ಟಿಕೆಟ್ ತಪ್ಪಿದಕ್ಕೆ ನನಗೆ ಬೇಸರವಾಗಿದೆ ಎಂದು ಹೇಳಿದ್ದರು ಎಂದು ಮನ್ವೆಂದ್ರ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com