ನಮ್ಮ ನಿರ್ಧಾರ ಸ್ಪಷ್ಟವಾಗಿದೆ. ಒಂದು ಬಾರಿ ಬಂದ್ ಆದ ಘಟಕವನ್ನು ಮತ್ತೆ ಆರಂಭಮಾಡುವ ಪ್ರಶ್ನೆಯೇ ಇಲ್ಲ. ಅವರು ಬಂದ್ ಮಾಡಿದ್ದನ್ನು ಪ್ರಶ್ನಿಸಿ ಎನ್ ಜಿಟಿ ಮೊರೆ ಹೋಗಿದ್ದಾರೆ. ನಾವು ತ್ರಿಸದಸ್ಯ ಸಮಿತಿಯ ಅಗತ್ಯ ಇಲ್ಲ ಎಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದೇವೆ ಎಂದು ಮೀನುಗಾರಿಕೆ ಸಚಿವ ಡಿ ಜಯಕುಮಾರ್ ಅವರು ವರದಿಗಾರರಿಗೆ ತಿಳಿಸಿದ್ದಾರೆ.