ದೆಹಲಿ ಬಿಜೆಪಿಯಿಂದ ಆಯೋಜಿಸಲಾಗಿದ್ದ ಪೂರ್ವಾಂಚಲ ಮಹಾಕುಂಭದಲ್ಲಿ ಭಾಗವಹಿಸಿ ಮಾತನಾಡಿರುವ ಅಮಿತ್ ಶಾ, ರಾಹುಲ್ ಗಾಂಧಿ, ಕೇಜ್ರಿವಾಲ್ ಅಕ್ರಮ ವಲಸಿಗರನ್ನು ರಕ್ಷಿಸಿ, ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಅಮಿತ್ ಶಾ ಆರೋಪಿಸಿದ್ದಾರೆ. ಅಕ್ರಮ ವಲಸಿಗರನ್ನು ಗೆದ್ದಲು ಹುಳಗಳಿಗೆ ಹೋಲಿಕೆ ಮಾಡಿರುವ ಅಮಿತ್ ಶಾ, ದೆಹಲಿಯಲ್ಲಿ ಈ ರೀತಿಯ ಅಕ್ರಮ ವಲಸಿಗರು ಸಮಸ್ಯೆ ಉಂಟುಮಾಡುತ್ತಿದ್ದಾರೆ. 2019 ರಲ್ಲಿ ಬಿಜೆಪಿ ಮತ್ತೆ ಸರ್ಕಾರ ರಚಿಸಿದ ನಂತರ ರಾಷ್ಟ್ರಾದ್ಯಂತ ಅಕ್ರಮ ವಲಸಿಗರನ್ನು ಪತ್ತೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.