ತಮಿಳುನಾಡಿನ ಮಧುರೈನಲ್ಲಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಸಂಚರಿಸುತ್ತಿದ್ದ ಮೂವರು ಸವಾರರು ಸರ್ಕಲ್ ನಲ್ಲಿ ಏಕಾಏಕಿ ರಸ್ತೆಗೆ ನುಗ್ಗಿದ್ದಾರೆ. ಈ ವೇಳೆ ರಸ್ತೆಯಲ್ಲಿ ಬರುತ್ತಿದ್ದ ತಮಿಳುನಾಡು ಸರ್ಕಾರಿ ಬಸ್ ಬೈಕ್ ಗೆ ಢಿಕ್ಕಿ ಹೊಡೆದಿದೆ. ಕೂಡಲೇ ಬೈಕ್ ಸವಾರರು ನೆಲಕ್ಕೆ ಬಿದ್ದಿದ್ದು, ಬಸ್ ಕೂಡ ಬೈಕ್ ನೊಂದಿಗೆ ಮುಂದಕ್ಕೆ ಬಂದಿದೆ. ಈ ವೇಳೆ ಕೂದಲೆಳೆ ಅಂತರದಲ್ಲಿ ಬೈಕ್ ಸವಾರರು ಪಾರಾಗಿದ್ದು, ಬಸ್ ಕೂಡಲೇ ನಿಂತಿದೆ. ಆ ಮೂಲಕ ಬಸ್ ಚಕ್ರಕ್ಕೆ ಸಿಲುಕುವ ಅಪಾಯದಿಂದ ತಪ್ಪಿಸಿಕೊಂಡಿದ್ದಾರೆ.