ನಮ್ಮಲ್ಲಿ ಆರೋಗ್ಯಶ್ರೀ ಯೋಜನೆಯಿದೆ, ಆಯೂಷ್ಮಾನ್ ಭಾರತ್ ನಮಗೇಕೆ!

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿಯ ಆಯೂಷ್ಮಾನ್ ಭಾರತ್ ಯೋಜನೆಗೆ ಚಾಲನೆ ನೀಡಿದ್ದು ಈ ಯೋಜನೆಯಿಂದ ತೆಲಂಗಾಣ ಹೊರಕ್ಕೆ ಬಂದಿದೆ...
ಚಂದ್ರಶೇಖರ್ ರಾವ್
ಚಂದ್ರಶೇಖರ್ ರಾವ್
Updated on
ಹೈದರಬಾದ್: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿಯ ಆಯೂಷ್ಮಾನ್ ಭಾರತ್ ಯೋಜನೆಗೆ ಚಾಲನೆ ನೀಡಿದ್ದು ಈ ಯೋಜನೆಯಿಂದ ತೆಲಂಗಾಣ ಹೊರಕ್ಕೆ ಬಂದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. 
ಆರೋಗ್ಯ ಯೋಜನೆಯಾದ ಆಯೂಷ್ಮಾನ್ ಭಾರತ್ ಗೆ ಚಾಲನೆ ಸಿಕ್ಕಿದ್ದು ತೆಲಂಗಾಣ ಈ ಯೋಜನೆಯನ್ನು ಅಳವಡಿಸಿಕೊಳ್ಳುವುದಿಲ್ಲ. ಕಾರಣ ಅದಾಗಲೇ ರಾಜ್ಯದಲ್ಲಿ ಆರೋಗ್ಯಶ್ರೀ ಯೋಜನೆ ಜಾರಿಯಲ್ಲಿದ್ದು ಈ ಯೋಜನೆಯಲ್ಲಿ ಸುಮಾರು 70 ಲಕ್ಷ ಕುಟುಂಬಗಳು ಒಳಗೊಂಡಿದೆ. ಹೀಗಾಗಿ ಕೇಂದ್ರ ಸರ್ಕಾರದ ಯೋಜನೆಯನ್ನು ತೆಲಂಗಾಣದಲ್ಲಿ ಅಳವಡಿಸಿಕೊಳ್ಳಲುವುದಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ. 
ತೆಲಂಗಾಣದಲ್ಲಿ ಆರೋಗ್ಯಶ್ರೀ ಯೋಜನೆಯನ್ನೇ ಮುಂದುವರೆಸಲಾಗುವುದು ಹೀಗಾಗಿ ಆಯೂಷ್ಮಾನ್ ಭಾರತ್ ಯೋಜನೆ ನಾವು ಅಳವಡಿಸಿಕೊಳ್ಳುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಪ್ರಧಾನಮಂತ್ರಿ ಜನ ಆರೋಗ್ಯ ಅಭಿಯಾನ್(ಪಿಎಂಜೆಎವೈ) ವಾರ್ಷಿಕವಾಗಿ ಪ್ರತಿ ಕುಟುಂಬಕ್ಕೆ 5 ಲಕ್ಷ ರು.ಗಳನ್ನು ಒದಗಿಸಲು ಉದ್ದೇಶಿಸಿದೆ. ಈ ಯೋಜನೆಯಿಂದ 10 ಕೋಟಿಗೂ ಹೆಚ್ಚು ಬಡ ಕುಟುಂಬಗಳಿಗೆ ಲಾಭವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com