ಪ್ರತ್ಯಕ್ಷದರ್ಶಿಗಳ ಪ್ರಕಾರ ಮಹಿಳಾ ಮಾವೋವಾದಿಗಳು ಶಾಸಕ, ಮಾಜಿ ಶಾಸಕನ ಮೇಲೆ ಗುಂಡು ಹಾರಿಸಿದ್ದು, ಆಂಧ್ರ-ಒಡಿಶಾ ಗಡಿ ಭಾಗದಲ್ಲಿದ್ದ ತಂಡ ಇದಾಗಿದೆ ಎಂದು ಹೇಳಲಾಗುತ್ತಿದೆ. ವೈಎಸ್ ಆರ್ ಕಾಂಗ್ರೆಸ್ ನಲ್ಲಿದ್ದ ಸರ್ವೇಶ್ವರ್ ರಾವ್ 2016 ರಲ್ಲಿ ಟಿಡಿಪಿಗೆ ಸೇರ್ಪಡೆಯಾಗಿದ್ದರು. ಹುಕುಂಪೇಟ್ ಮಂಡಲ್ ನಲ್ಲಿ ತಮ್ಮ ಸಂಬಂಧಿಕರ ಹೆಸರಿನಲ್ಲಿ ಗಣಿಗಾರಿಕೆ ಪರವಾನಗಿ ಪಡೆದಿದ್ದಕ್ಕಾಗಿ ಬುಡಕಟ್ಟು ಜನಾಂಗದವರು ಗಿರಿಜನ ಸಂಘಂ ಬ್ಯಾನರ್ ನಡಿ ಪ್ರತಿಭಟನೆ ನಡೆಸುತ್ತಿದ್ದರು.