ಗೋವಾ: ಅನಾರೋಗ್ಯ ಕಾರಣ ಮನೋಹರ್ ಪರ್ರಿಕರ್ ಸಂಪುಟದ ಇಬ್ಬರು ಸಚಿವರಿಗೆ ಕೊಕ್!

ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಸಂಪುಟದಿಂದ ಇಬ್ಬರು ಸಚಿವರನ್ನು ಕೈಬಿಡಲಾಗಿದೆ ಎಂದು ...
ಮನೋಹರ್ ಪರ್ರಿಕರ್
ಮನೋಹರ್ ಪರ್ರಿಕರ್
Updated on

ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಸಂಪುಟದಿಂದ ಇಬ್ಬರು ಸಚಿವರನ್ನು ಕೈಬಿಡಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಸೋಮವಾರ ತಿಳಿಸಿದೆ.

ಬಿಜೆಪಿಯ ಫ್ರಾನ್ಸಿಸ್ ಡಿ ಸೋಜ ಮತ್ತು ಪಾಂಡುರಂಗ ಮಡ್ಕೈಕರ್ ಕಳೆದ ಕೆಲವು ಸಮಯಗಳಿಂದ ಅನಾರೋಗ್ಯಕ್ಕೀಡಾಗಿದ್ದು ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ತಮ್ಮ ಅನಾರೋಗ್ಯಕ್ಕೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂದರ್ಭದಲ್ಲಿಯೇ ಈ ವಿದ್ಯಮಾನ ನಡೆದಿದೆ.
ನಗರಾಭಿವೃದ್ಧಿ ಸಚಿವರಾಗಿದ್ದ ಡಿಸೋಜ ಮತ್ತು ಇಂಧನ ಖಾತೆ ಸಚಿವರಾಗಿ ಮಡ್ಕೈಕರ್ ಕಾರ್ಯನಿರ್ವಹಿಸುತ್ತಿದ್ದರು.

ಸಚಿವ ಡಿಸೋಜ ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕಳೆದ ಜೂನ್ ನಲ್ಲಿ ಹೃದಯಾಘಾತಕ್ಕೀಡಾಗಿದ್ದ ಮಡ್ಕೈಕರ್ ಮುಂಬೈಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರ ಬದಲಿಗೆ ಇಂದು ಸಂಜೆ ಬಿಜೆಪಿ ನಾಯಕರಾದ ನೀಲೇಶ್ ಕಬ್ರಲ್ ಮತ್ತು ಮಿಲಿಂಡ್ ನಾಯಕ್ ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಮನೋಹರ್ ಪರ್ರಿಕರ್ ಅವರು ಗೋವಾ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದು ಸಚಿವ ಸಂಪುಟದ ಪುನಾರ್ರಚನೆ ಸದ್ಯದಲ್ಲಿಯೇ ನಡೆಯಲಿದೆ ಎಂದು ನಿನ್ನೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com