ಇದಕ್ಕೆ ಪುಷ್ಟಿ ನೀಡುವಂತೆ ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ಪುತ್ರ, ಶಿವ ವಿಧಾನಸಭಾ ಕ್ಷೇತ್ರದ ಶಾಸಕ ಮನ್ವಿಂದರ್ ಸಿಂಗ್ ಅವರು ಕಳೆದ ಶನಿವಾರ ಬಿಜೆಪಿಗೆ ಗುಡ್ ಬೈ ಹೇಳಿದ್ದು, ಪಶ್ಚಿಮ ರಾಜಸ್ಥಾನದ ರಜಪೂತ ಸಮುದಾಯದಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದಾರೆ. ಮನ್ವಿಂದರ್ ಸಿಂಗ್ ಪಕ್ಷ ತೊರೆದಿರುವುದು ಬಿಜೆಪಿಗೆ ಹಿನ್ನಡೆಯಾಗಲಿದೆ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ.