ಸೂರ್ಯನ ಕಿರಣವೇ ಉತ್ತಮ ಕೀಟನಾಶ ಎಂಬ ಮಾತಿನಂತೆ, ಜನ ನೇರವಾಗಿ ಕೋರ್ಟ್ ನಲ್ಲಿ ಏನಾಗುತ್ತಿದೆ ಎಂಬ ಮಾಹಿತಿ ಪಡೆಯಲಿ. ಆ ಮೂಲಕ ಇಲ್ಲದ ಊಹೋಪೋಹಗಳನ್ನು ತಡೆಯಬಹುದಾಗಿದೆ. ಕೋರ್ಟ್ ಕಲಾಪ ನೇರ ಪ್ರಸಾರ ಸಂಬಂಧ ಸಾರ್ವಜನಿಕ ಹಕ್ಕುಗಳ ಸಮತೋಲನಕ್ಕೆ ಅಗತ್ಯ ನಿಯಮಗಳು ಮತ್ತು ದಾವೆದಾರರ ಘನತೆಯನ್ನು ರಕ್ಷಿಸುವ ಕುರಿತು ಶೀಘ್ರ ನಿಯಮ ರಚನೆಯಾಗುತ್ತದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್ ಈ ಕುರಿತು ಸೂಕ್ತ ಮಾರ್ಗಸೂಚಿ ರೂಪಿಸುವಂತೆ ಸರ್ಕಾರಕ್ಕೆ ಹೇಳಿದೆ.