ವಿಧಾನಸಭೆ ವಿಸರ್ಜನೆಯಾಗಿರುವ ರಾಜ್ಯಗಳಲ್ಲಿ ನೀತಿ ಸಂಹಿತೆ ಜಾರಿ: ಚುನಾವಣಾ ಆಯೋಗ

ಅವಧಿಗೂ ಮುನ್ನವೇ ವಿಧಾನಸಭೆ ವಿಸರ್ಜನೆಯಾಗಿರುವ ರಾಜ್ಯಗಳಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಚುನಾವಣಾ...
ತೆಲಂಗಾಣ ಹಂಗಾಮಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್
ತೆಲಂಗಾಣ ಹಂಗಾಮಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್
Updated on
ನವದೆಹಲಿ: ಅವಧಿಗೂ ಮುನ್ನವೇ ವಿಧಾನಸಭೆ ವಿಸರ್ಜನೆಯಾಗಿರುವ ರಾಜ್ಯಗಳಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೊಳಿಸಬೇಕು ಮತ್ತು ಹಂಗಾಮಿ ಸರ್ಕಾರ ಯಾವುದೇ ಹೊಸ ಯೋಜನೆಗಳನ್ನು ಘೋಷಿಸಬಾರದು ಎಂದು ಕೇಂದ್ರ ಚುನಾವಣಾ ಆಯೋಗ ಗುರುವಾರ ಹೇಳಿದೆ.
ಈ ಸಂಬಂಧ ಸಂಪುಟ ಕಾರ್ಯದರ್ಶಿಗೆ ಪತ್ರ ಬರೆದಿರುವ ಚುನಾವಣಾ ಆಯೋಗ, ವಿಧಾನಸಭೆ ವಿಸರ್ಜನೆಯಾಗಿರುವ ರಾಜ್ಯಗಳಲ್ಲಿ ನೀತಿ ಸಂಹಿತೆ ಜಾರಿಗೆಯಾಗಿದ್ದು, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಆ ರಾಜ್ಯಗಳಿಗೆ ಸಂಬಂಧಿಸಿದಂತೆ ಯಾವುದೇ ಹೊಸ ಯೋಜನೆ ಘೋಷಿಸಬಾರದು ಎಂದು ಸೂಚಿಸಿದೆ.
ತೆಲಂಗಾಣದಲ್ಲಿ ಅವಧಿಗೂ ಮುನ್ನವೇ ವಿಧಾನಸಭೆ ವಿಸರ್ಜಿಸಿರುವುದರಿಂದ ಚುನಾವಣಾ ಆಯೋಗ ಈ ಸೂಚನೆ ನೀಡಿದೆ.
ಸಾಮಾನ್ಯವಾಗಿ ಚುನಾವಣೆ ದಿನಾಂಕ ಘೋಷಣೆಯಾದ ನಂತರ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತದೆ ಮತ್ತು ಚುನಾವಣಾ ಪ್ರಕ್ರಿಯೆ ಮುಗಿಯುವರೆಗೆ ಅದು ಜಾರಿಯಲ್ಲಿರುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com