ವಿಧಾನಸಭೆ ವಿಸರ್ಜನೆಯಾಗಿರುವ ರಾಜ್ಯಗಳಲ್ಲಿ ನೀತಿ ಸಂಹಿತೆ ಜಾರಿ: ಚುನಾವಣಾ ಆಯೋಗ

ಅವಧಿಗೂ ಮುನ್ನವೇ ವಿಧಾನಸಭೆ ವಿಸರ್ಜನೆಯಾಗಿರುವ ರಾಜ್ಯಗಳಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಚುನಾವಣಾ...
ತೆಲಂಗಾಣ ಹಂಗಾಮಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್
ತೆಲಂಗಾಣ ಹಂಗಾಮಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್
ನವದೆಹಲಿ: ಅವಧಿಗೂ ಮುನ್ನವೇ ವಿಧಾನಸಭೆ ವಿಸರ್ಜನೆಯಾಗಿರುವ ರಾಜ್ಯಗಳಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೊಳಿಸಬೇಕು ಮತ್ತು ಹಂಗಾಮಿ ಸರ್ಕಾರ ಯಾವುದೇ ಹೊಸ ಯೋಜನೆಗಳನ್ನು ಘೋಷಿಸಬಾರದು ಎಂದು ಕೇಂದ್ರ ಚುನಾವಣಾ ಆಯೋಗ ಗುರುವಾರ ಹೇಳಿದೆ.
ಈ ಸಂಬಂಧ ಸಂಪುಟ ಕಾರ್ಯದರ್ಶಿಗೆ ಪತ್ರ ಬರೆದಿರುವ ಚುನಾವಣಾ ಆಯೋಗ, ವಿಧಾನಸಭೆ ವಿಸರ್ಜನೆಯಾಗಿರುವ ರಾಜ್ಯಗಳಲ್ಲಿ ನೀತಿ ಸಂಹಿತೆ ಜಾರಿಗೆಯಾಗಿದ್ದು, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಆ ರಾಜ್ಯಗಳಿಗೆ ಸಂಬಂಧಿಸಿದಂತೆ ಯಾವುದೇ ಹೊಸ ಯೋಜನೆ ಘೋಷಿಸಬಾರದು ಎಂದು ಸೂಚಿಸಿದೆ.
ತೆಲಂಗಾಣದಲ್ಲಿ ಅವಧಿಗೂ ಮುನ್ನವೇ ವಿಧಾನಸಭೆ ವಿಸರ್ಜಿಸಿರುವುದರಿಂದ ಚುನಾವಣಾ ಆಯೋಗ ಈ ಸೂಚನೆ ನೀಡಿದೆ.
ಸಾಮಾನ್ಯವಾಗಿ ಚುನಾವಣೆ ದಿನಾಂಕ ಘೋಷಣೆಯಾದ ನಂತರ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತದೆ ಮತ್ತು ಚುನಾವಣಾ ಪ್ರಕ್ರಿಯೆ ಮುಗಿಯುವರೆಗೆ ಅದು ಜಾರಿಯಲ್ಲಿರುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com