ಸುಪ್ರೀಂಕೋರ್ಟ್ ನ ಸಿಜೆ ದೀಪಕ್ ಮಿಶ್ರಾ ಸೇರಿದಂತೆ ಪಂಚ ಪೀಠ ನ್ಯಾಯಾಧೀಶರು ಪ್ರತ್ಯೇಕ ತೀರ್ಪನ್ನು ನೀಡಿದ್ದಾರೆ. ದೀಪಕ್ ಮಿಶ್ರಾ ಅವರು ತಮ್ಮ ತೀರ್ಪಿನಲ್ಲಿ ಮಹಿಳೆಯರೂ ಯಾವಾಗಲೂ ತಮ್ಮ ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದಾರೆ. ಮಹಿಳೆಯರನ್ನು ದುರ್ಬರಂತೆ ನೋಡಬಾರದು. ಭಾರತದಲ್ಲಿ ಮಹಿಳೆಯರಿಗೆ ದೇವತೆಯ ಸ್ಥಾನ ನೀಡಲಾಗಿದೆ. ಮಹಿಳೆಯರ ಕುರಿತು ಸಮಾಜದ ಗ್ರಹಿಕೆ ಬದಲಾಗಬೇಕು ಎಂದು ಹೇಳಿದ್ದು ಕೊನೆಗೆ ದೇವಸ್ತಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿದ್ದಾರೆ.