ಸರ್ಜಿಕಲ್ ದಾಳಿಗೆ 2 ವರ್ಷ ತುಂಬಿರುವ ಹಿನ್ನಲೆಯಲ್ಲಿ ನಿನ್ನೆ ಉತ್ತರ ಪ್ರದೇಶದಲ್ಲಿ ಸಭೆಯೊಂದರಲ್ಲಿ ಮಾತನಾಡಿದ ಕೇಂದ್ರ ಸಚಿವ ರಾಜನಾಥ್ ಸಿಂಗ್, 'ಎರಡು-ಮೂರು ದಿನಗಳ ಹಿಂದೆ ಏನೋ ದೊಡ್ಡದು ನಡೆದಿದೆ. ಆ ಬಗ್ಗೆ ಸದ್ಯ ಬಹಿರಂಗ ಪಡಿಸಲಾಗದು. ಎಲ್ಲವೂ ನಾವಂದುಕೊಂಡ ಹಾಗೇ ಆಗಿದೆ. ಅಷ್ಟೇ ಅಲ್ಲ, ಭವಿಷ್ಯದಲ್ಲಿ ಏನೇನೆಲ್ಲ ಆಗಲಿದೆ ಎಂಬುದನ್ನು ಕಾದು ನೋಡಿ' ಎಂದು ಮಾರ್ಮಿಕವಾಗಿ ಹೇಳಿದ್ದಾರೆ.