ಕಾಶ್ಮೀರ ರಾಜಧಾನಿ ಶ್ರೀನಗರದಲ್ಲಿರುವ ಎಸ್ ಪಿಎ ಕ್ಯಾಂಪ್ ನಿಂದಲೇ 7 ರೈಫಲ್ ಗಳು ಮತ್ತು ಒಂದು ಪಿಸ್ತೂಲ್ ಅನ್ನು ಕದ್ದು ಅಧಿಕಾರಿ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಅಧಿಕಾರಿಯನ್ನು ಎಸ್ ಪಿಒ ಅಧಿಕಾರಿ ಅದಿಲ್ ಬಷೀರ್ ಎಂದು ಗುರುತಿಸಲಾಗಿದೆ. ಅಂತೆಯೇ ಈತ ಸ್ಥಳೀಯ ಉಗ್ರ ಸಂಘಟನೆಗಳೊಂದಿಗೆ ಕೈ ಜೋಡಿಸಿರುವ ಶಂಕೆ ಇದ್ದು, ಇದೀಗ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.