ಇಂದೋರ್: 50 ಲಕ್ಷ ಜನರ ಸಾವಿಗೆ ಕಾರಣವಾಗಬಲ್ಲ ಅಪಾಯಕಾರಿ ರಾಸಾಯನಿಕ ವಶ, ಪಿಎಚ್‌ಡಿ ಪದವೀಧರನ ಬಂಧನ

ಮಧ್ಯ ಪ್ರದೇಶದ ಇಂದೋರ್ ನಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಪ್ರಯೋಗಾಲಯದ ಮೇಲೆ ದಾಳಿ ನಡೆಸಿದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಸುಮಾರು 50ಲಕ್ಷ ಜನರನ್ನು...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಇಂದೋರ್: ಮಧ್ಯ ಪ್ರದೇಶದ ಇಂದೋರ್ ನಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಪ್ರಯೋಗಾಲಯದ ಮೇಲೆ ದಾಳಿ ನಡೆಸಿದ  ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಸುಮಾರು 50 ಲಕ್ಷ ಜನರನ್ನು ಕೊಲ್ಲಬಲ್ಲ 9 ಕೆಜಿ ಸಂಶ್ಲೇಷಿತ ಅತ್ಯಂತ ವಿಷಕಾರಿ ರಾಸಾಯನಿಕ ಒಪಿಯಾಡ್ ಹಾಗೂ ಫೆಂಟನೈಲ್ ಅನ್ನು ವಶಕ್ಕೆ ಪಡೆಇದ್ದಾರೆ.
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ವಿಜ್ಞಾನಿಗಳ ಸಹಾಯದೊಡನೆ ನಡೆದಿದ್ದ ಈ ದಾಳಿಯ ವೇಳೆ ಅಮೆರಿಕಾ ವಿರೋಧಿಯಾಗಿದ್ದ ಪಿಎಚ್‌ಡಿ ಪದವೀಧರ ಹಾಗೂ ಮೆಕ್ಸಿಕೋ ಪ್ರಜೆಯೊಬ್ಬನನ್ನು ಬಂಧಿಸಿದ್ದಾರೆ.
ಈ ರಾಸಾಯನಿಕವನ್ನೇನಾದರೂ ರಾಸಾಯನಿಕ ಯುದ್ಧದಲ್ಲಿ ಬಳಕೆ ಮಾಡಿದ್ದಾದರೆ ದೊಡ್ಡ ಪ್ರಮಾಣದ ಸಾವು-ನೋವಿಗೆ ಇದು ಕಾರಣವಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಅಲ್ಲದೆ ಭಾರತದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ವಿನಾಶಕಾರಿ ರಾಸಾಯನಿಕ ವಶಕ್ಕೆ ಪಡೆದುಕೊಳ್ಳುತ್ತಿರುವುದು ಇದೇ ಮೊದಲ ಬಾರಿಯಾಗಿದೆ ಎಂದು ಅವರು ವಿವರಿಸಿದರು.
ಸ್ಥಳೀಯ ಉದ್ಯಮಿ ಹಾಗೂ ಅಮೆರಿಕದಿಂದ ಪಿಎಚ್‍ಡಿ ಪಡೆದ ರಾಸಾಯನಿಕ ವಿದ್ವಾಂಸ ಪಾಲುದಾರಿಕೆಯಲ್ಲಿ ಈ ಪ್ರಯೋಗಾಲಯ ನಡೆಯುತ್ತಿತ್ತು.
ವಶಕ್ಕೆ ಪಡೆಯಲಾದ ರಾಸಾಯನಿಕಗಳ ಅಂದಾಜು ಮೌಲ್ಯ 110 ಕೋಟಿ ರೂ. ಎನ್ನಲಾಗಿದ್ದು ಫೆಂಟನೈಲ್ ರಾಸಾಯನಿಕ ಹೆರಾಯಿನ್ ಗಿಂತಲೂ ಐವತ್ತು ಪಟ್ಟು ಹೆಚ್ಚು ಶಕ್ತಿಶಾಲಿಯಾಗಿದೆ.ಇದರ ಕಣಗಳು ಉಸಿರಾಟದಲ್ಲಿ ಸಿಕ್ಕರೆ ಅದು ಅತ್ಯಂತ ಮಾರಕ ಪರಿಣಾಮವನ್ನುಂಟು ಮಾಡುತ್ತದೆ. ಈ ನಿರ್ದಿಷ್ಟ ದಾಳಿಯ ಮೂಲಕ ಭಾರತದಲ್ಲಿ ಸಂಭವಿಸಬಹುದಾಗಿದ್ದ ಭೀಕರ ದುರಂತವೊಂದನ್ನು ತಡೆಯಲು ಸಾಧ್ಯವಾಗಿದೆ ಎಂದು ಡಿಆರ್‌ಐ ಮಹಾನಿರ್ದೇಶಕ ಡಿ.ಪಿ. ಡ್ಯಾಶ್  ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com