ಈ ನಡುವೆ ಪೊಲೀಸ್ ಅಧಿಕಾರಿಯ ಸಾವಿಗೆ ಗುಪ್ತಚರ ಮಾಹಿತಿ ವೈಫಲ್ಯವೇ ಕಾರಣವೇ ಎಂಬ ಪ್ರಶ್ನೆಗೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದು, ಈಗಲೇ ಈ ಬಗ್ಗೆ ಖಚಿತವಾಗಿ ಹೇಳಲು ಸಾಧ್ಯವಿಲ್ಲ, ತನಿಖೆ ಪೂರ್ಣಗೊಳ್ಳುವವರೆಗೂ ಇಲಾಖೆಯ ಯಾವ ಅಧಿಕಾರಿಯ ವಿರುದ್ಧವೂ ಕ್ರಮ ಕೈಗೊಳ್ಳುವುದಿಲ್ಲ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಅಡಿಜಿ ಆನಂದ್ ಕುಮಾರ್ ಹೇಳಿದ್ದಾರೆ.