ಮಧುರೈ ಮೂಲದ ಹಿರಿಯ ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಮುತ್ತು ಕುಮಾರ್ ಎಂಬುವವರು ಟಿಕ್ ಟಾಕ್ ಆ್ಯಪ್ ವಿರುದ್ಧ ದೂರು ನೀಡಿದ್ದು, ಆ್ಯಪ್ ಮೂಲಕ ಯುವಕರು ಮತ್ತು ಮಕ್ಕಳಲ್ಲಿ ಆಶ್ಲೀಲತೆಯನ್ನು ಪ್ರಚಾರ ಪಡಿಸಲಾಗುತ್ತಿದೆ. ಹೀಗಾಗಿ ಇದನ್ನು ನಿಷೇಧಿಸಬೇಕು ಎಂದು ದೂರು ಸಲ್ಲಿಕೆ ಮಾಡಿದ್ದರು. ದೂರಿನಲ್ಲಿ ಆ್ಯಪ್ ನ ಮೂಲಕ ಭಾರತೀಯ ಸಂಸ್ಕೃತಿಯ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಮಕ್ಕಳ ಮೇಲೆ ಶೋಷಣೆಯಾಗುತ್ತಿದೆ. ಅಂತೆಯೇ ಆ್ಯಪ್ ಯುವಕರು ಮತ್ತು ಮಕ್ಕಳಲ್ಲಿ ಆತ್ಮಹತ್ಯಾ ಭಾವನೆಯನ್ನು ಬೆಳೆಸುತ್ತಿದೆ. ಹೀಗಾಗಿ ಕೂಡಲೇ ಆ್ಯಪ್ ಅನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ.