ಪುಲ್ವಾಮ ಭಯೋತ್ಪಾದಕ ದಾಳಿ ಬಗ್ಗೆ ಮಾತನಾಡಲು ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಅವಕಾಶ ನೀಡದ ಬಗ್ಗೆ ಪ್ರಕಾಶ್ ಅಂಬೇಡ್ಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪುಲ್ವಾಮ ದಾಳಿಯಲ್ಲಿ 40 ಯೋಧರನ್ನು ಕಳೆದುಕೊಂಡೆವು. ಆದರೆ ಸುಮ್ಮನೆ ಕುಳಿತಿದ್ದೇವೆ. ಪುಲ್ವಾಮ ದಾಳಿ ಬಗ್ಗೆ ಮಾತನಾಡದೇ ಇರುವಂತೆ ಸೂಚನೆ ನೀಡಲಾಗಿದೆ. ಚುನಾವಣಾ ಆಯೋಗ ನಮ್ಮನ್ನು ಹೇಗೆ ಕಟ್ಟುಹಾಕುವುದಕ್ಕೆ ಸಾಧ್ಯ? ಸಂವಿಧಾನ ನಮಗೆ ಮಾತನಾಡುವ ಹಕ್ಕು ನೀಡಿದೆ. ನಾನು ಬಿಜೆಪಿಯಲ್ಲ ಅಧಿಕಾರಕ್ಕೆ ಬಂದರೆ ಚುನಾವಣಾ ಆಯೋಗವನ್ನೇ 2 ದಿನ ಜೈಲಿಗೆ ಕಳಿಸುತ್ತೇನೆ ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದರು.