ನವದೆಹಲಿ: ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಅದರ ನಡುವೆಯೇ ಇಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಸಂಸ್ಥಾಪನಾ ದಿನಾಚರಣೆ ಆಚರಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂದೇಶ ನೀಡಿದ್ದಾರೆ. "ಪಕ್ಷವು ಹಗಲು-ರಾತ್ರಿ ದೇಶಕ್ಕಾಗಿ ಕೆಲಸ ಮಾಡಿದೆ, ಪಕ್ಷದ ಈ ಕಾರ್ಯದಕ್ಷತೆಗೆ ಬದಲಾಗಿ ಈ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಹಾಗೂ ಅದರ ಮಿತ್ರಪಕ್ಷಗಳಿಗೆ ಜನರ ಆಶೀರ್ವಾದ ದೊರೆಯಲಿದೆ" ಪ್ರಧಾನಿ ಭರವಸೆ ವ್ಯಕ್ತಪಡಿಸಿದ್ದಾರೆ.