ನವದೆಹಲಿ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿ ನಡೆದ ನಂತರ ಭಾರತ ಪಾಕಿಸ್ತಾನದ ಬಾಲಾಕೋಟ್ ನಲ್ಲಿರುವ ಜೈಶ್ ಎ ಮೊಹಮ್ಮದ್ ಸಂಘಟನೆಯ ಶಿಬಿರ ತಾಣದ ಮೇಲೆ ವಾಯುದಾಳಿ ನಡೆಸಿದ್ದು, ಹೊಸ ಉದ್ಯೋಗ ಕೋಟಾ ಮತ್ತು ರೈತರಿಗೆ ನಗದು ಮೊತ್ತ ವಿತರಣೆಯ ಭರವಸೆ ಲೋಕಸಭೆ ಚುನಾವಣೆಯ ಸನ್ನಿಹಿತದ ಹೊಸ್ತಿಲಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯನ್ನು ಉತ್ತುಂಗಕ್ಕೆ ಏರಿಸಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ.