ಕೇರಳದ ತ್ರಿಶೂರ್ ನಲ್ಲಿ ವಿದ್ಯಾರ್ಥಿನಿ ಕುದುರೆ ಸವಾರಿ ಮಾಡುತ್ತಿರುವ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು ಈ ವಿಡಿಯೋವನ್ನು ಮಹೀಂದ್ರ ಗ್ರೂಪ್ ಚೇರ್ಮನ್ ಆನಂದ್ ಮಹೀಂದ್ರ ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತ್ರಿಶೂರ್ ನಲ್ಲಿರುವ ಆಕೆಯ ಪರಿಚಿತರು ಇದ್ದರೆ ನನಗೆ ತಿಳಿಸಿ. ಈ ಬಾಲಕಿ ಹಾಗೂ ಕುದುರೆ ಫೋಟೋವನ್ನು ನಾನು ಕ್ಲಿಕ್ಕಿಸಬೇಕು. ಆ ಫೋಟೋವನ್ನು ನನ್ನ ಮೊಬೈಲ್ ನ ಸ್ಕ್ರೀನ್ ಸೇವರ್ ಆಗಿ ಮಾಡಿಕೊಳ್ಳುತ್ತೇನೆ. ಆಕೆಯೇ ನನ್ನ ಪಾಲಿನ ಹೀರೋ ಎಂದು ಮೆಚ್ಚುಗೆ ಸಾಲನ್ನು ಬರೆದುಕೊಂಡಿದ್ದಾರೆ.