ಭೋಪಾಲ್: ಮುಂಬೈ ದಾಳಿಯಲ್ಲಿ ಹುತಾತ್ಮರಾದ ಮಹಾರಾಷ್ಟ್ರ ಎ.ಟಿ.ಎಸ್. ಮುಖ್ಯಸ್ಥ ಹೇಮಂತ ಕರ್ಕರೆ ಅವರಿಗೆ ನಾನು ಶಾಪ ಹಾಕಿದ್ದೆ. ನನ್ನ ಶಾಪದಿಂದ ಹಾಗೂ ಅವರ ಕರ್ಮದಿಂದ ಮೃತಪಟ್ಟಿದ್ದಾರೆ ಎಂದು ಹೇಳಿದ 2008ರ ಮಾಲೆಗಾಂವ್ ನ್ಪೋಟ ಪ್ರಕರಣದ ಆರೋಪಿ, ಭೋಪಾಲ್ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರನ್ನು ಐಪಿಎಸ್ ಅಧಿಕಾರಿಗಳು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.