ರೋಹಿತ್‌ ತಿವಾರಿ ಸಾವು ಅಸ್ವಾಭಾವಿಕ: ಪೋಸ್ಟ್ ಮಾರ್ಟಂ ವರದಿ; ಕೊಲೆ ಪ್ರಕರಣ ದಾಖಲು

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ದಿ. ಎನ್‌.ಡಿ.ತಿವಾರಿ ಅವರ ಪುತ್ರ ರೋಹಿತ್ ಶೇಖರ್ ತಿವಾರಿ ಸಾವು ಅಸ್ವಾಭಾವಿಕ ಎಂದು ಮರಣೋತ್ತರ ಪರೀಕ್ಷಾ ವರದಿ...
ರೋಹಿತ್ ಶೇಖರ್ ತಿವಾರಿ
ರೋಹಿತ್ ಶೇಖರ್ ತಿವಾರಿ
Updated on
ನವದೆಹಲಿ: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ದಿ. ಎನ್‌.ಡಿ.ತಿವಾರಿ ಅವರ ಪುತ್ರ ರೋಹಿತ್ ಶೇಖರ್ ತಿವಾರಿ ಸಾವು ಅಸ್ವಾಭಾವಿಕ ಎಂದು ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್‌ 302 ಅಡಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರೋಹಿತ್ ತಿವಾರಿ ಸಾವಿನ ಪ್ರಕರಣವನ್ನು ಕ್ರೈಂ ಬ್ರ್ಯಾಂಚ್‌ಗೆ ವರ್ಗಾಯಿಸಲಾಗಿದ್ದು, ದೆಹಲಿಯ ಡಿಫೆನ್ಸ್ ಕಾಲೋನಿಯಲ್ಲಿರುವ ತಿವಾರಿ ನಿವಾಸಕ್ಕೆ ಭೇಟಿ ನೀಡಿ, ಪರಿಶೀಲಿಸಲಾಗಿದೆ.
ರೋಹಿತ್ ಅವರನ್ನು ಆಸ್ಪತ್ರೆಗೆ ದಾಖಲಿಸಿದಾಗ ಅವರ ಮೂಗಿನಲ್ಲಿ ರಕ್ತ ಸೋರುತ್ತಿತ್ತು. ಹೀಗಾಗಿ ಪಿಲ್ಲೋದಿಂದ ಅವರನ್ನು ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.
ಕಳೆದ ಮಂಗಳವಾರ ರೋಹಿತ್ ತಿವಾರಿ ಅವರು ಡಿಫೆನ್ಸ್ ಕಾಲೋನಿಯ ನಿವಾಸದಲ್ಲಿ ಮಲಗಿದ್ದಲ್ಲೇ ಮೃತಪಟ್ಟಿದ್ದರು. ಅವರು ಪ್ರತಿಕ್ರಿಯೆ ನೀಡದ್ದನ್ನು ನೋಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com