ಕಾಂಗ್ರೆಸ್ ಬಹುಮತ ಪಡೆಯಲ್ಲ, ಮೈತ್ರಿ ಅತ್ಯವಶ್ಯಕ- ಕಮಲ್ ನಾಥ್

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯುವ ಸಾಧ್ಯತೆ ಕಡಿಮೆ ಇದ್ದು, ಕೇಂದ್ರದಲ್ಲಿ ಅಧಿಕಾರ ರಚಿಸಲು ಚುನಾವಣೆ ನಂತರವೂ ಮೈತ್ರಿ ಅಗತ್ಯವಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಹೇಳಿದ್ದಾರೆ.
ಕಮಲ್ ನಾಥ್
ಕಮಲ್ ನಾಥ್
Updated on

ಮಧ್ಯಪ್ರದೇಶ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯುವ ಸಾಧ್ಯತೆ ಕಡಿಮೆ ಇದ್ದು, ಕೇಂದ್ರದಲ್ಲಿ ಅಧಿಕಾರ ರಚಿಸಲು ಚುನಾವಣೆ ನಂತರವೂ ಮೈತ್ರಿ ಅಗತ್ಯವಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಹೇಳಿದ್ದಾರೆ.

ಬಿಜೆಪಿ ಬಹುಮತ ಪಡೆಯದಿದ್ದರೆ  ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ಅದನ್ನು ಹೊರತುಪಡಿಸಿದತೆ ಮೈತ್ರಿ ರಚನೆಗೆ ಇನ್ನಿತರ ದೊಡ್ಡ ರಾಜಕೀಯ ಪಕ್ಷಗಳಿಲ್ಲ ಎಂದು ಅವರು ಹೇಳಿದ್ದಾರೆ.

ನಾವು ಉತ್ತಮವಾದ ಕೆಲಸವನ್ನೇ ಮಾಡುತ್ತಿದ್ದೇವೆ. ಆದರೆ, ಬಹುಮತ ಗಳಿಸುವಲ್ಲಿ ವಿಫಲವಾದಲ್ಲಿ  ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ದೂರ ಇಡಲು ಮೈತ್ರಿ ಮಾಡಿಕೊಳ್ಳಬೇಕಾದ ಅಗತ್ಯವಿದೆ ಎಂದಿದ್ದಾರೆ.

ಪ್ರಸ್ತುತ ಬಿಜೆಪಿ ವಿರೋಧ, ಬಿಜೆಪಿ ಪರ ಎಂಬ ಎರಡು ವಿಧಗಳಿವೆ. ಬಿಜೆಪಿ ಪರ ಸಂಖ್ಯೆ ಕಡಿಮೆ ಇದೆ . ಆದರೆ, ಬಿಜೆಪಿ ವಿರೋಧಿ ಗುಂಪು  ಅದರ ರಾಜಕೀಯ ನೀತಿ ವಿರುದ್ಧವಾಗಿರುವುದಾಗಿ . ಕಾಂಗ್ರೆಸ್  ಪಕ್ಷಕ್ಕೆ ಬಹುಮತ ಬಂದರೆ ರಾಹುಲ್ ಗಾಂಧಿ ಖಂಡತವಾಗಿ ಪ್ರಧಾನಿಯಾಗಲಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com