ಆಸ್ಪತ್ರೆಯಲ್ಲಿ ಎಐಎಡಿಎಂಕೆ ಅಧಿನಾಯಕಿಯ ಸಾವಿನ ಕುರಿತು ನಡೆಯುತ್ತಿರುವ ವಿಚಾರಣೆಯನ್ನು ನಿಲ್ಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿ ಎಪ್ರಿಲ್ 4ರಂದು ಆದೇಶ ನಿಡಿತ್ತು. ಇದನ್ನು ಪ್ರಶ್ನಿಸಿ ಅಪೋಲೋ ಆಸ್ಪತ್ರೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ಮುಖ್ಯ ನ್ಯಾಯಾಧೀಶ ರಂಜನ್ ಗೊಗೊಯ್ ನೇತೃತ್ವದ ಪೀಠವು ಇಂದು ಆಸ್ಪತ್ರೆಯ ಮನವಿಯನ್ನು ಆಲಿಸಿದೆ.