ಈ ವೇಳೆ ಮಾತನಾಡಿದ ಬಾಬಾ ರಾಮ್ ದೇವ್, 'ರಾಷ್ಟ್ರವಾದಿ, ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರಿಗೆ ಜೈಲಿನಲ್ಲಿ ಒಂಬತ್ತು ವರ್ಷಗಳ ಕಾಲ ಸತತ ಕಿರುಕುಳ ನೀಡಿದ್ದರು. ಆ ಒತ್ತಡದಿಂದಲೇ ಕ್ಯಾನ್ಸರ್ ಕಾಯಿಲೆ ಆರಂಭವಾಗಿತ್ತು. ಯಾವ ತಪ್ಪೂ ಮಾಡದ ಸಾಧ್ವಿ ಅವರನ್ನು ಕೇವಲ ಶಂಕೆಯ ಮೇರೆಗೆ ಬಂಧನಕ್ಕೀಡು ಮಾಡಿದ್ದರು. ಅಲ್ಲದೆ ಅವರನ್ನು ಒಂಬತ್ತು ವರ್ಷ ಜೈಲಿನಲ್ಲಿಟ್ಟು ಹಿಂಸಿಸಲಾಗಿತ್ತು. ಅವರ ಮೇಲೆ ನಡೆದ ಮಾನಸಿಕ ಮತ್ತು ದೈಹಿಕ ದೌರ್ಜನ್ಯಗಳ ಒತ್ತಡ ತಾಳಲಾರದೆ ಅವರು ಕ್ಯಾನ್ಸರ್ ಗೆ ತುತ್ತಾಗುವಂತಾಯಿತು ಎಂದು ಹೇಳಿದರು.