ಟೀ ಮಾರುತ್ತಿದ್ದ ಅವತಾರ್ ಸಿಂಗ್ ಇಂದು ಉತ್ತರ ದೆಹಲಿ ಮೇಯರ್!

ಬದುಕೋದಕ್ಕೆಂದು ಟೀ ಮಾರುತ್ತಿದ್ದ ವ್ಯಕ್ತಿಯೋರ್ವನನ್ನು ಉತ್ತರ ದೆಹಲಿಯ ಮೇಯರ್ ಆಗಿ ಆಯ್ಕೆ ಮಾಡಲಾಗಿದೆ.
ಅವತಾರ್ ಸಿಂಗ್-ಮೋದಿ
ಅವತಾರ್ ಸಿಂಗ್-ಮೋದಿ
Updated on
ನವದೆಹಲಿ: ಬದುಕೋದಕ್ಕೆಂದು ಟೀ ಮಾರುತ್ತಿದ್ದ ವ್ಯಕ್ತಿಯೋರ್ವನನ್ನು ಉತ್ತರ ದೆಹಲಿಯ ಮೇಯರ್ ಆಗಿ ಆಯ್ಕೆ ಮಾಡಲಾಗಿದೆ.
ದಲಿತ ಸಿಖ್ ಸಮುದಾಯಕ್ಕೆ ಸೇರಿದ ಬಿಜೆಪಿ ಕಾರ್ಪೋರೇಟರ್ ಅವತಾರ್ ಸಿಂಗ್ ಮೇಯರ್ ಹುದ್ದೆಗೆ ಏರಿದ ಅಪರೂಪದ ಘಟನೆಯಾಗಿದೆ. ಉತ್ತರ ದೆಹಲಿಯ ಮೇಯರ್ ಸ್ಥಾನಕ್ಕೆ ಅವತಾರ್ ಸಿಂಗ್ ಅವರ ಹೆಸರನ್ನು ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ ಸೂಚಿಸಿದ್ದರು. 
ಚುನಾವಣೆಯನ್ನು ಉತ್ತರ ದೆಹಲಿ ಪಾಲಿಕೆಯ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಆದರೆ ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅವತಾರ್ ಸಿಂಗ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com