ಸ್ಫೋಟದ ತೀವ್ರತೆಗೆ ಸೇನಾವಾಹನ ಜಖಂಗೊಂಡಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ದಾಳಿಯ ಬಳಿಕ, ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರೆದು ಭಯೋತ್ಪಾದಕರ ಶೋಧ ಕಾರ್ಯಾಚರಣೆ ಆರಂಭಿಸಿವೆ. ಫೆಬ್ರವರಿ 14 ರಂದು ಜಿಲ್ಲೆಯ ಸಿಆರ್ಪಿಎಫ್ ಬೆಂಗಾವಲು ಪಡೆಯ ಮೇಲೆ ಭಯೋತ್ಪಾದಕರು ನಡೆಸಿದ್ದ ಭೀಕರ ಬಾಂಬ್ ದಾಳಿಯಲ್ಲಿ ಸುಮಾರು 40 ಯೋಧರು ಹುತಾತ್ಮರಾಗಿದ್ದರು.