ಕೇರಳ: ಕುಡಿದು ಚಾಲನೆ ಮಾಡುತ್ತಿದ್ದ ಐಎಎಸ್ ಅಧಿಕಾರಿಯ ಕಾರು, ಬೈಕಿಗೆ ಡಿಕ್ಕಿ, ಪತ್ರಕರ್ತ ಸಾವು

ಕುಡಿದು ಚಾಲನೆ ಮಾಡುತ್ತಿದ್ದ ಕೇರಳದ ಐಎಎಸ್ ಅಧಿಕಾರಿ ಶ್ರೀರಾಮ್ ವೆಂಕಟರಾಮನ್ ಅವರ ಕಾರು ಶನಿವಾರ ಬೆಳಗಿನ ಜಾವ ಪತ್ರಕರ್ತರೊಬ್ಬರ ಬೈಕಿಗೆ...
ಅಪಘಾತ ನಡೆದ ಸ್ಥಳ
ಅಪಘಾತ ನಡೆದ ಸ್ಥಳ
Updated on
ತಿರುವನಂತಪುರಂ: ಕುಡಿದು ಚಾಲನೆ ಮಾಡುತ್ತಿದ್ದ ಕೇರಳದ ಐಎಎಸ್ ಅಧಿಕಾರಿ ಶ್ರೀರಾಮ್ ವೆಂಕಟರಾಮನ್ ಅವರ ಕಾರು ಶನಿವಾರ ಬೆಳಗಿನ ಜಾವ ಪತ್ರಕರ್ತರೊಬ್ಬರ ಬೈಕಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇಂದು ಬೆಳಗಿನ ಜಾವ ಮ್ಯೂಸಿಯಂ ಜಂಕ್ಷನ್ ಬಳಿ ಈ ಅಪಘಾತ ಸಂಭವಿಸಿದ್ದು, ಪತ್ರಕರ್ತ ಕೆಎಂ ಬಶೀರ್ ಅವರು ಮೃತಪಟ್ಟ ದುರ್ದೈವಿ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಶೀರ್ ಅವರನ್ನು ಕೂಡಲೇ ಸರ್ಕಾರಿ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
ಇನ್ನು ಕುಡಿದ ಮತ್ತಿನಲ್ಲಿ ಕಾರು ಚಾಲನೆ ಮಾಡಿದ ಐಎಎಸ್ ಅಧಿಕಾರಿ ಶ್ರೀರಾಮ್ ಸಹ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 
ಬಶೀರ್ ನಿಧನಕ್ಕೆ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು ತೀವ್ರ ಸಂತಪಾ ಸೂಚಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com