ಆರ್ಟಿಕಲ್ 370 ರದ್ದು: ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಿಷ್ಟು!

ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370 ರನ್ನು ರದ್ದುಗೊಳಿಸಿರುವ ಮೋದಿ ಸರ್ಕಾರದ ಐತಿಹಾಸಿಕ ನಿರ್ಣಯದ ಬಗ್ಗೆ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಪ್ರತಿಕ್ರಿಯೆ
ಆರ್ಟಿಕಲ್ 370 ರದ್ದು: ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದೇನು?
ಆರ್ಟಿಕಲ್ 370 ರದ್ದು: ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದೇನು?
Updated on
ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370 ರನ್ನು ರದ್ದುಗೊಳಿಸಿರುವ ಮೋದಿ ಸರ್ಕಾರದ ಐತಿಹಾಸಿಕ ನಿರ್ಣಯದ ಬಗ್ಗೆ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. 
ಟ್ವೀಟರ್ ನಲ್ಲಿ ಬರೆದಿರುವ ಸುಬ್ರಹ್ಮಣಿಯನ್ ಸ್ವಾಮಿ, ನಾನು ಹೇಳಿದ್ದು ಸರಿಯಾಗಿದೆ ಎಂಬುದು ಸಾಬೀತಾಗಿದೆ. ಆರ್ಟಿಕಲ್ 370 ರದ್ದುಗೊಳಿಸುವುದಕ್ಕೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕಿಲ್ಲ ಎಂದು ಹೇಳಿದ್ದೆ. ಅದು ಇಂದು ಸಾಬೀತಾಗಿದೆ. ಆದರೂ ರಾಷ್ಟ್ರಪತಿಗಳು ಅದಾಗಲೇ ಅಂಗೀಕರಿಸಿದ್ದ ನಿರ್ಣಯವನ್ನು ಅಮಿತ್ ಶಾ ಸಂಸತ್ ನಲ್ಲಿ ಘೊಷಿಸಿದ್ದಾರೆ. ಆರ್ಟಿಕಲ್ 370, 35ಎ ಇಂದು ಅಂತ್ಯಗೊಂಡಿದೆ ಎಂದು ಸ್ವಾಮಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com