ಇನ್ನು ಕೇಂದ್ರ ರೈಲ್ವೇ ಇಲಾಖೆ ಕೂಡ ಈ ಸಂಬಂಧ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಕಣಿವೆ ರಾಜ್ಯದಲ್ಲಿರುವ ಪ್ರವಾಸಿಗರು, ಯಾತ್ರಾರ್ಥಿಗಳ ರಕ್ಷಣೆಗೆ ಮುಂದಾಗಿದ್ದು, ಟಿಕೆಟ್ ಇಲ್ಲದೆಯೇ ರೈಲಿನಲ್ಲಿ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಇನ್ನು ಲಡಾಖ್ ಸೇರಿದಂತೆ ಜಮ್ಮು ಕಾಶ್ಮೀರದಾದ್ಯಂತ ಸೇನಾಪಡೆಗಳು ಹೈಅಲರ್ಟ್ ಘೋಷಣೆ ಮಾಡಿದ್ದು, ಯಾವುದೇ ರೀತಿಯ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧ ಸ್ಥಿತಿಯಲ್ಲಿರುವಂತೆ ಸೂಚಿಸಲಾಗಿದೆ.