2024ರ ಚುನಾವಣೆ ಗೆಲುವಿಗಾಗಿ ನಕಾರಾತ್ಮಕತೆ ತೊಲಗಿಸಿ: ಬಿಜೆಪಿ ಸಂಸದರಿಗೆ ಮೋದಿ ಕಿವಿಮಾತು

ಬಿಜೆಪಿ ಸಂಸದರು ತಮ್ಮ ಪಕ್ಷಕ್ಕೆ ಮತ ಹಾಕದವರ ಬಗೆಗಿನ ನಕಾರಾತ್ಮಕ ಭಾವನೆಯನ್ನು ತೊಡೆದು ಹಾಕಿ, 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಲು ತಮ್ಮ ಮತ್ತು ಪಕ್ಷ....
ನರೇಂದ್ರ ಮೋದಿ
ನರೇಂದ್ರ ಮೋದಿ
Updated on
ನವದೆಹಲಿ: ಬಿಜೆಪಿ ಸಂಸದರು ತಮ್ಮ ಪಕ್ಷಕ್ಕೆ ಮತ ಹಾಕದವರ ಬಗೆಗಿನ ನಕಾರಾತ್ಮಕ ಭಾವನೆಯನ್ನು ತೊಡೆದು ಹಾಕಿ, 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಲು ತಮ್ಮ ಮತ್ತು ಪಕ್ಷದ ಒಳಿತಿಗಾಗಿ ಕಾರ್ಯಪ್ರವೃತ್ತರಾಗುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.
ಬಿಜೆಪಿ ಸಂಸದರಿಗೆ ಆಯೋಜಿಸಲಾಗಿದ್ದ ಎರಡು ದಿನಗಳ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸರ್ವರ ಅಭ್ಯುದಯಕ್ಕೆ ಶ್ರಮಿಸುವಂತೆ ಕರೆ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೆಲಸಕ್ಕೆ ಆದ್ಯತೆ ನೀಡಿದರೆ, ಬಿಜೆಪಿಗೆ ಮತಹಾಕದವರೂ ಕೂಡ ಕೇಸರಿ ಪಕ್ಷದ ಸಿದ್ಧಾಂತಗಳಿಗೆ ಹತ್ತಿರವಾಗುತ್ತಾರೆ ಎಂಬುದಾಗಿ ವಿವರಿಸಿದ್ದಾರೆ ಎಂದರು. 
ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡುವಂತೆ ಶಾಸಕರನ್ನು ಒತ್ತಾಯಿಸಿದ ಪ್ರಧಾನಿ: "ನೀವೆಲ್ಲರೂ ರಾಷ್ಟ್ರ ನಿರ್ಮಾಣಕ್ಕಾಗಿ ಕೆಲಸ ಮಾಡಬೇಕು. ನಿಮ್ಮ ಸ್ವಂತ ಆರೋಗ್ಯದ ಬಗ್ಗೆ ಗಮನಹರಿಸುವುದರ ಜೊತೆಗೆ, ನಿಮ್ಮ ಕುಟುಂಬವನ್ನು ನೋಡಿಕೊಳ್ಳಲು ನೀವು ಸ್ವಲ್ಪ ಸಮಯವನ್ನು ಸಹ ವಿನಿಯೋಗಿಸಬೇಕು" ಎಂದು ಹೇಳಿದರು.
 ತರಬೇತಿ ಕಾರ್ಯಕ್ರಮದ ಮೊದಲ ದಿನ ನೂತನವಾಗಿ ಆಯ್ಕೆಯಾದ ಬಿಜೆಪಿ ಸಂಸದರಿಗೆ ಯಶಸ್ವಿ ಸಾರ್ವಜನಿಕ ಪ್ರತಿನಿಧಿಯಾಗುವುದು ಹೇಗೆ ಎಂಬ ಬಗ್ಗೆ ಪ್ರಧಾನಿ ವಿವರಿಸಿದ್ದರು.
ಆಯಾ ಕ್ಷೇತ್ರಗಳಲ್ಲಿ ತಮ್ಮ ಯಶಸ್ಸಿಗೆ ಶ್ರಮಿಸಿದ ತಮ್ಮ ಹಿತೈಷಿಗಳ ಜೊತೆ ಸಂಪರ್ಕದಲ್ಲಿರಲು ಮೋದಿ ಸಂಸದರನ್ನು ಕೇಳಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com