ಕಾಶ್ಮೀರ ಸಮಸ್ಯೆಗೆ ಪರಿಹಾರ ಆರಂಭವಾಗಿದೆ: ನಟ ಅನುಪಮ್ ಖೇರ್

ದಶಕಗಳಿಂದಲೂ ಭಾರತಕ್ಕೆ ನುಂಗಲಾರದ ತುತ್ತಾಗಿದ್ದ ಜಮ್ಮು ಮತ್ತು ಕಾಶ್ಮೀರ ಸಮಸ್ಯೆಗೆ ಪರಿಹಾರ ಆರಂಭವಾಗಿದೆ ಎಂದು ಖ್ಯಾತ ಬಾಲಿವುಡ್ ನಟ ಅನುಪಮ್ ಖೇರ್ ಮಾರ್ಮಿಕವಾಗಿ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಮುಂಬೈ: ದಶಕಗಳಿಂದಲೂ ಭಾರತಕ್ಕೆ ನುಂಗಲಾರದ ತುತ್ತಾಗಿದ್ದ ಜಮ್ಮು ಮತ್ತು ಕಾಶ್ಮೀರ ಸಮಸ್ಯೆಗೆ ಪರಿಹಾರ ಆರಂಭವಾಗಿದೆ ಎಂದು ಖ್ಯಾತ ಬಾಲಿವುಡ್ ನಟ ಅನುಪಮ್ ಖೇರ್ ಮಾರ್ಮಿಕವಾಗಿ ಹೇಳಿದ್ದಾರೆ.
ಪ್ರಸ್ತುತ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಂಟಾಗಿರುವ ಪ್ರಕ್ಷುಬ್ಧತೆ ಕುರಿತಂತೆ ಟ್ವೀಟ್ ಮಾಡಿರುವ ನಟ ಅನುಪಮ್ ಖೇರ್, ಕಾಶ್ಮೀರ ಸಮಸ್ಯೆಗೆ ಪರಿಹಾರ ಆರಂಭವಾಗಿದೆ ಎಂದು ಹೇಳಿದ್ದಾರೆ. 
ನಟ ಅನುಪಮ್ ಖೇರ್ ಅವರ ಈ ಟ್ವೀಟ್ ಇದೀಗ ವೈರಲ್ ಆಗಿದ್ದು, ಕೇಂದ್ರ ಸರ್ಕಾರ ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನ ರದ್ದಾಗಲಿದೆಯೇ..? ಕಾಶ್ಮೀರವನ್ನು 2 ರಾಜ್ಯಗಳಾಗಿ ಇಬ್ಬಾಗ ಮಾಡುವ ಸಾಧ್ಯತೆ ಇದೆಯೇ? ಅಥವಾ ಕಣಿವೆ ರಾಜ್ಯಕ್ಕೆ ವಿಶೇಷ ಹಕ್ಕು ನೀಡುವ ಸಂವಿಧಾನದ ಕಲಂ 370 ಮತ್ತು 35ಎ ತಿದ್ದುಪಡಿಯಾಗಲಿದೆಯೇ ಎಂಬಿತ್ಯಾದಿ ಪ್ರಶ್ನೆಗಳು ಮೂಡಲಾರಂಭಿಸಿವೆ.
ಈ ಹಿಂದೆಯೂ ಕೂಡ ಅನುಪಮ್ ಖೇರ್ ಅವರು ಸಾಕಷ್ಟು ಬಾರಿ ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಧನಿ ಎತ್ತಿದ್ದರು. ಪ್ರಮುಖವಾಗಿ ಕಾಶ್ಮೀರಿ ಪಂಡಿತರ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದ ಅವರು, ಕಾಶ್ಮೀರಿ ಪಂಡಿತರನ್ನು ಪುನಃ ಕಾಶ್ಮೀರಕ್ಕೆ ಕರೆತರುವ ಪ್ರಯತ್ನಕ್ಕೆ ಬೆಂಬಲ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com