ಕೇಂದ್ರದ ನಿರ್ಧಾರವನ್ನು ಸ್ಥಳೀಯರು ಸ್ವಾಗತಿಸುತ್ತಿದ್ದಾರೆ. ರಾಜ್ಯದಲ್ಲಿ ಪರಿಸ್ಥಿತಿ ತೃಪ್ತಿಕರವಾಗಿದೆ ಎಂದು ಗೃಹ ಸಚಿವಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಅಜಿತ್ ದೋವಲ್ ವಿವರಿಸಿದ್ದಾರೆ. 370 ನೇ ವಿಧಿ ರದ್ಧತಿ, ಜಮ್ಮು ಮತ್ತು ಕಾಶ್ಮೀರ ಪುನರ್ ವಿಂಗಡಣೆ ಮಾಡಿರುವ ಹಿನ್ನೆಲೆಯಲ್ಲಿ, ಅಧಿಕಾರ ಮತ್ತು ಹೊಣೆಗಾರಿಕೆಗಳ ವರ್ಗಾವಣೆ ಸುಗಮವಾಗಿ ನಡೆಯಲು ಸೂಕ್ತ ತಂತ್ರಗಳೊಂದಿಗೆ ಅಜಿತ್ ದೋವಲ್ ಮುಂದುವರಿಯುತ್ತಿದ್ದಾರೆ. 370 ನೇ ವಿಧಿ ರದ್ದತಿಗೆ ಕಾಶ್ಮೀರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಮತ್ತು ಯಾವುದೇ ಆತಂಕಗಳಿಲ್ಲ. ಜನರು ತಮ್ಮ ಕೆಲಸ, ಕಾರ್ಯಗಳಲ್ಲಿ ನಿರತರಾಗಿದ್ದಾರೆ" ಎಂದು ಅಜಿತ್ ದೋವಲ್ ಕೇಂದ್ರಕ್ಕೆ ಸಲ್ಲಿಸಿರುವ ವರದಿಯಲ್ಲಿ ತಿಳಿಸಿದ್ದಾರೆ.