ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನದ ಸಂವಿಧಾನ ವಿಧಿ 370ನ್ನು ಕೇಂದ್ರ ಸರ್ಕಾರ ರದ್ದುಪಡಿಸಿದ್ದಕ್ಕಾಗಿ ಅವರು ತೀವ್ರ ಹರ್ಷಗೊಂಡಿದ್ದರು. ದೇಶಕ್ಕೆ ಸಂಬಂಧಪಟ್ಟ ವಿಚಾರವಿರಲಿ, ರಾಜಕೀಯ ವಿಚಾರವಿರಲಿ ಅವರು ಭಾರತೀಯ ಜನತಾ ಪಕ್ಷದಲ್ಲಿ ಅಗ್ರಪಂಕ್ತಿಯ ನಾಯಕರ ಜೊತೆಯಲ್ಲಿಯೇ ತಮ್ಮ ಜೀವಿತಾವಧಿಯಲ್ಲಿ ಹೋರಾಡಿದವರು. ಜಮ್ಮು-ಕಾಶ್ಮೀರ ಸಮಸ್ಯೆ ವಿಚಾರದಲ್ಲಿ ಕೂಡ ಅವರು ಹೋರಾಟ ಮಾಡಿಕೊಂಡು ಬಂದಿದ್ದರು.