'ಹಿಂದೂ ಪಾಕಿಸ್ತಾನ' ಹೇಳಿಕೆ: ಶಶಿ ತರೂರ್ ವಿರುದ್ಧ ಬಂಧನ ವಾರಂಟ್ ಜಾರಿ

'ಹಿಂದೂ ಪಾಕಿಸ್ತಾನ' ವಿವಾದಾತ್ಮಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾ ಕೋರ್ಟ್ ಮಂಗಳವಾರ ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಅವರ ವಿರುದ್ಧ ಬಂಧಮ ವಾರಂಟ್ ಜಾರಿ ಮಾಡಿದೆ.
ಶಶಿ ತರೂರ್
ಶಶಿ ತರೂರ್
Updated on

ಕೋಲ್ಕತಾ: 'ಹಿಂದೂ ಪಾಕಿಸ್ತಾನ' ವಿವಾದಾತ್ಮಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾ ಕೋರ್ಟ್ ಮಂಗಳವಾರ ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಅವರ ವಿರುದ್ಧ ಬಂಧಮ ವಾರಂಟ್ ಜಾರಿ ಮಾಡಿದೆ.

ಶಶಿ ತರೂರ್ ವಿರುದ್ಧ ವಕೀಲ ಸುಮೀತ್ ಚೌಧರಿ ಅವರು ದಾಖಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿದ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್, ತಿರುವನಂತಪುರಂ ಕಾಂಗ್ರೆಸ್ ಸಂಸದನ ವಿರುದ್ಧ ವಾರಟ್ ಜಾರಿ ಮಾಡಿದೆ.

ಕಳೆದ ವರ್ಷ ಜುಲೈನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ತರೂರ್, 2019ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಹಿಂದೂ ಪಾಕಿಸ್ತಾನವಾಗುವ ಜೊತೆಗೆ ಭಾರತ ಸಂವಿಧಾನವನ್ನು ನಾಶ ಮಾಡಲಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com