ಅಯ್ಯಪ್ಪ ಭಕ್ತರ ಗಮನಕ್ಕೆ; ಶಬರಿಮಲೆಯಲ್ಲಿ ಮೊಬೈಲ್ ಬಳಕೆ ಮೇಲೆ ಕಠಿಣ ನಿಷೇಧ!

ಅಯ್ಯಪ್ಪ ಸ್ವಾಮಿಯ ಪವಿತ್ರ ಯಾತ್ರಾ ಸ್ಥಳ ಶಬರಿಮಲೆಯಲ್ಲಿ ಇನ್ನು ಮುಂದೆ ಮೊಬೈಲ್ ಬಳಕೆ ಮೇಲೆ ಕಠಿಣ ನಿಷೇಧ ಹೇರಲು ದೇವಾಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಕೊಚ್ಚಿನ್: ಅಯ್ಯಪ್ಪ ಸ್ವಾಮಿಯ ಪವಿತ್ರ ಯಾತ್ರಾ ಸ್ಥಳ ಶಬರಿಮಲೆಯಲ್ಲಿ ಇನ್ನು ಮುಂದೆ ಮೊಬೈಲ್ ಬಳಕೆ ಮೇಲೆ ಕಠಿಣ ನಿಷೇಧ ಹೇರಲು ದೇವಾಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ.

ಈ ಹಿಂದೆಯೇ ಶಬರಿಮಲೆ ಆವರಣದಲ್ಲಿ ಮೊಬೈಲ್ ಬಳಕೆ ಮೇಲೆ ನಿಷೇಧ ಹೇರಲಾಗಿತ್ತಾದರೂ ಅದರ ಪರಿಣಾಮಕಾರಿ ಜಾರಿ ಸಾಧ್ಯವಾಗಿರಲಿಲ್ಲ. ಇದೀಗ ಈ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿರುವ ಅಯ್ಯಪ್ಪ ಸ್ವಾಮಿ ದೇಗುಲ ಆಡಳಿತ ಮಂಡಳಿ ಮೊಬೈಲ್ ಬಳಕೆಯನ್ನು ತಡೆಯಲು ಪರಿಣಾಮಕಾರಿ ಕಾನೂನು ಜಾರಿಗೊಳಿಸುವುದಾಗಿ ಹೇಳಿದೆ.

ಇದಕ್ಕಾಗಿ ಈ ಹಿಂದೆಯೇ ಓಂಬುಡ್ಸ್ ಮನ್ ಕೂಡ ಜಾರಿಗೆ ತರಲಾಗಿತ್ತು. ನ್ಯಾಯಮೂರ್ತಿ ಪಿಆರ್ ರಾಮನ್ ನೇತೃತ್ವದ ಓಂಬುಡ್ಸ್ ಮನ್ ತಂಡ ಮೊಬಲ್ ಬಳಕೆಯನ್ನು ನಿಯಂತ್ರಿಸುವುದರ ಕುರಿತು ಗಂಭೀರ ಚಿಂತನೆಯಲ್ಲಿ ತೊಡಗಿದೆ. ಈ ಬಗ್ಗೆ ಕೇರಳ ಹೈಕೋರ್ಟ್ ದೇಗುಲದ ಆಡಳಿತ ಮಾಹಿತಿ ನೀಡಿದ್ದು, ದೇವಾಲಯದ ಆವರಣದಲ್ಲಿ ಯಾವುದೇ ಕಾರಣಕ್ಕೂ ಮೊಬೈಲ್ ಬಳಕೆ, ಫೋಟೋ ತೆಗೆಯುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com