ಅತ್ಯಾಚಾರಿಗಳಿಗೆ ಸಿಕ್ಕ ಶಿಕ್ಷೆಗೆ ಬಹಳ ಸಂತೋಷವಾಯಿತು, ನನ್ನ ಮಗಳ ಅತ್ಯಾಚಾರಿಗಳಿಗೂ ಗಲ್ಲುಶಿಕ್ಷೆ ನೀಡಿ: ನಿರ್ಭಯಾ ತಾಯಿ

ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳಿಗೆ ಸಿಕ್ಕ ಶಿಕ್ಷೆಗೆ ಬಹಳ ಸಂತೋಷವಾಯಿತು. ನನ್ನ ಮಗಳ ಅತ್ಯಾಚಾರಿಗಳಿಗೂ ತ್ವರಿಗತಿಯಲ್ಲಿ ಗಲ್ಲುಶಿಕ್ಷೆ ನೀಡಿ ಎಂದು ನಿರ್ಭಯಾ ತಾಯಿ ಆಗ್ರಹಿಸಿದ್ದಾರೆ. 
ಆಶಾ ದೇವಿ,
ಆಶಾ ದೇವಿ,
Updated on

ನವದೆಹಲಿ: ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳಿಗೆ ಸಿಕ್ಕ ಶಿಕ್ಷೆಗೆ ಬಹಳ ಸಂತೋಷವಾಯಿತು. ನನ್ನ ಮಗಳ ಅತ್ಯಾಚಾರಿಗಳಿಗೂ ತ್ವರಿಗತಿಯಲ್ಲಿ ಗಲ್ಲುಶಿಕ್ಷೆ ನೀಡಿ ಎಂದು ನಿರ್ಭಯಾ ತಾಯಿ ಆಗ್ರಹಿಸಿದ್ದಾರೆ. 

ಪ್ರಿಯಾಂಕಾ ರೆಡ್ಡಿ ಹತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಲಗಾಗಿದ್ದ ಎಲ್ಲಾ ನಾಲ್ವರು ಆರೋಪಿಗಳನ್ನು ಇಂದು ಬೆಳಿಗ್ಗೆ ಹೈದರಾಬಾದ್ ಪೊಲೀಸರು ಎನ್ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. 

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ನಿರ್ಭಯಾ ತಾಯಿ ಆಶಾ ದೇವಿಯವರು, ತೆಲಂಗಾಣ ಪಶುವೈದ್ಯೆ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಂಬಂಧ ಕಾಮುಕರಿಗೆ ಸಿಕ್ಕಿರುವ ಶಿಕ್ಷೆಯಿಂದ ಬಹಳ ಸಂತೋಷವಾಗಿದೆ. ಪೊಲೀಸರು ಅತ್ಯುತ್ತಮ ಕಾರ್ಯ ಮಾಡಿದ್ದಾರೆ. ಪೊಲೀಸ್ ಸಿಬ್ಬಂದಿ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಳ್ಳದಂತೆ ಈ ಮೂಲಕ ಆಗ್ರಹಿಸುತ್ತೇನೆಂದು ಹೇಳಿದ್ದಾರೆ. 

ಕಳೆದ 7 ವರ್ಷಗಳಿಂದ ಪ್ರತೀ ಕಚೇರಿಯಿಂದ ಕಚೇರಿಗೆ ಅಲೆಯುತ್ತಲೇ ಇದ್ದೇನೆ. ನನ್ನ ಮಗಳ ಅತ್ಯಾಚಾರಿಗಳಿಗೆ ತ್ವರಿತಗತಿಯಲ್ಲಿ ಗಲ್ಲು ಶಿಕ್ಷೆ ನೀಡುವಂತೆ ಈ ಮೂಲಕ ದೇಶದ ನ್ಯಾಯಾಂಗ ವ್ಯವಸ್ಥೆ ಬಳಿ ಮನವಿ ಮಾಡಿಕೊಳ್ಳುತ್ತೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com