ನವದೆಹಲಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ|| ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಅಂಗವಾಗಿ ದೇಶ ಇಂದು ಅವರಿಗೆ ಗೌರವ ಶ್ರದ್ಧಾಂಜಲಿ ಸಲ್ಲಿಸುತ್ತಿದೆ.
ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಅಂಬೇಡ್ಕರ್ ವಿಚಾರಧಾರೆಗಳನ್ನು ಮೆಲುಕು ಹಾಕುವ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಸಂಸತ್ತಿನ ಕೇಂದ್ರ ಸಭಾಂಗಣದಲ್ಲಿ ಪ್ರಧಾನ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರೆ ಕೇಂದ್ರ ಸಚಿವರು, ರಾಜಕೀಯ ಪಕ್ಷಗಳ ನಾಯಕರು ಸಂವಿಧಾನ ಶಿಲ್ಪಿಗೆ ಗೌರವ ನಮನ ಸಲ್ಲಿಸಲಿದ್ದಾರೆ.
Advertisement