ಅಯೋಧ್ಯೆ ತೀರ್ಪು: ಹಿಂದೂ ಮಹಾಸಭಾದಿಂದ 'ಸುಪ್ರೀಂ'ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಕೆ

ಅಯೋಧ್ಯೆಯಲ್ಲಿ ರಾಮ ಜನಭೂಮಿ-ಬಾಬರಿ ಮಸೀದಿ ನಿವೇಶನ ವಿವಾದ ಕುರಿತು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಹಿಂದೂ ಮಹಾ ಸಭಾ ಮರು ಪರಿಶೀಲನಾ ಅರ್ಜಿಯನ್ನು ಸೋಮವಾರ ಸಲ್ಲಿಸಿದೆ.
ಹಿಂದೂ ಮುಸ್ಲಿಂರ ಸಂಭ್ರಮ
ಹಿಂದೂ ಮುಸ್ಲಿಂರ ಸಂಭ್ರಮ
Updated on

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಜನಭೂಮಿ-ಬಾಬರಿ ಮಸೀದಿ ನಿವೇಶನ ವಿವಾದ ಕುರಿತು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಹಿಂದೂ ಮಹಾ ಸಭಾ ಮರು ಪರಿಶೀಲನಾ ಅರ್ಜಿಯನ್ನು ಸೋಮವಾರ ಸಲ್ಲಿಸಿದೆ. 

ಇದರೊಂದಿಗೆ  ಸುಪ್ರೀಂ ಕೋರ್ಟ್ ನೀಡಿದ್ದ ಐತಿಹಾಸಿಕ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ 7 ಅರ್ಜಿಗಳು ದಾಖಲಾದಂತಾಗಿದೆ. ಮುಸ್ಲಿಮರು ಈವರೆಗೆ ಆರು ಮರು ಪರಿಶೀಲನಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದಾರೆ. 

ಹಿಂದೂಗಳ  ಕಡೆಯಿಂದ  ಸಲ್ಲಿಸಲಾದ ಮೊದಲ  ಮರು ಪರಿಶೀಲನಾ ಅರ್ಜಿ ಇದಾಗಿದೆ. ಮುಸ್ಲಿಮರಿಗೆ ಅಯೋಧ್ಯೆಯ ಪ್ರಮುಖ ಪ್ರದೇಶದಲ್ಲಿ ಮಸೀದಿ ನಿರ್ಮಾಣಕ್ಕಾಗಿ 5 ಎಕರೆ ಭೂಮಿಯನ್ನು ಮಂಜೂರು ಮಾಡಬೇಕು ಎಂಬ ಸುಪ್ರೀಂ ಕೋರ್ಟ್  ತೀರ್ಪನ್ನು ಪ್ರಶ್ನಿಸಿ ಹಿಂದೂ ಮಹಾಸಭಾ ಅರ್ಜಿ ಸಲ್ಲಿಸಿದೆ. 

ಡಿಸೆಂಬರ್ 2ರಂದು ಉತ್ತರ ಪ್ರದೇಶದ ಜಾಮಿಯತ್  ಉಲಾಮಾ? ಎ- ಹಿಂದ್ ಅಧ್ಯಕ್ಷ ಸಯ್ಯದ್ ಅಷ್ಪದ್ ರಷೀದಿ ಅವರು ಮೊದಲ ಪರಿಶೀಲನಾ ಅರ್ಜಿಯನ್ನು ಸಲ್ಲಿಸಿದ್ದರು. 

ಸುಪ್ರೀಂ ಕೋರ್ಟ್ ನ ಈ ಹಿಂದಿನ  ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ವಿವಾದಗ್ರಸ್ಥ  2.77 ಎಕರೆ ಜಮೀನಿನಲ್ಲಿ ಕೇಂದ್ರ ಸರ್ಕಾರ ನೇಮಿಸಲಿರುವ ಟ್ರಸ್ಟ್ ನೇತೃತ್ವದಲ್ಲಿ ರಾಮ ಮಂದಿರ ನಿರ್ಮಿಸಬೇಕು ಮತ್ತು ಅಯೋಧ್ಯೆಯ ಪ್ರಮುಖ ಪ್ರದೇಶದಲ್ಲಿ ಮಸೀದಿ ನಿರ್ಮಾಣಕ್ಕಾಗಿ ಮುಸ್ಲಿಮರಿಗೆ 5 ಎಕರೆ ಭೂಮಿಯನ್ನು ಮಂಜೂರು ಮಾಡಬೇಕು ಎಂದು ತೀರ್ಪು ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com