ತಿರುಪತಿ ದೇವಾಲಯದ ಆವರಣದಲ್ಲೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ: ದರ್ಶನದ ಸಮಯ ವ್ಯತ್ಯಯ! 

ತಿರುಪತಿ ದೇವಾಲಯ ಇರುವ ಆವರಣ ಪ್ರದೇಶದಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತಿರುಪತಿ ದೇವಾಲಯದ ಆವರಣದಲ್ಲೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ: ದರ್ಶನದ ಸಮಯ ವ್ಯತ್ಯಯ!
ತಿರುಪತಿ ದೇವಾಲಯದ ಆವರಣದಲ್ಲೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ: ದರ್ಶನದ ಸಮಯ ವ್ಯತ್ಯಯ!
Updated on

ತಿರುಪತಿ: ತಿರುಪತಿ ದೇವಾಲಯ ಇರುವ ಆವರಣ ಪ್ರದೇಶದಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ದೇವಾಲಯದ ಆವರಣದಲ್ಲಿ ಚಲಿಸುತ್ತಿದ್ದ ಹಾಲಿನ ವ್ಯಾನ್ ನ ಹಿಂಬದಿಯ ಚಕ್ರಕ್ಕೆ ಸಿಲುಕಿ 50-55 ವರ್ಷದ ವ್ಯಕ್ತಿ ಜೀವ ಕಳೆದುಕೊಂಡಿದ್ದಾನೆ. ಆರಂಭದಲ್ಲಿ ಇದನ್ನು ಅಪಘಾತವೆಂದೇ ಭಾವಿಸಲಾಗಿತ್ತು. ಆದರೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಇದು ಆತ್ಮಹತ್ಯೆ ಎಂಬುದು ತಿಳಿದುಬಂದಿದೆ. 

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಈ ವ್ಯಕ್ತಿಯ ಗುರುತನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತೊಡಗಿವೆ. 

ದೇವಾಲಯದ ಬಳಿ ಈ ಆತ್ಮಹತ್ಯೆ ಮಾಡಿಕೊಂಡ ಬಳಿಕ ಶ್ರೀವಾರಿ ದರ್ಶನವನ್ನು ಕೆಲಕಾಲ ಸ್ಥಗಿತಗೊಳಿಸಲಾಗಿತ್ತು. ನಂತರ ಧಾರ್ಮಿಕ ಕ್ರಿಯೆಗಳು ನಡೆದ ಬಳಿಕ ದರ್ಶನ ಪುನಾರಂಭ ಮಾಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com