ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ: ನಿರ್ಮಲಾ ಸೀತಾರಾಮನ್

ರಾಜಕೀಯ ಲಾಭಕ್ಕಾಗಿ ಸೋನಿಯಾ ಗಾಂಧಿ ವಿದ್ಯಾರ್ಥಿಗಳ ಮೂಂದೆ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೇವಡಿ ಮಾಡಿದ್ದಾರೆ.
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
Updated on

ದೆಹಲಿ: ರಾಜಕೀಯ ಲಾಭಕ್ಕಾಗಿ ಸೋನಿಯಾ ಗಾಂಧಿ ವಿದ್ಯಾರ್ಥಿಗಳ ಮೂಂದೆ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೇವಡಿ ಮಾಡಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಕುರಿತು ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷೆ, ಕೋಮು ಭಿನ್ನಾಭಿಪ್ರಾಯವನ್ನು ಸೃಷ್ಟಿಸುವ ಮೂಲಕ ಬಿಜೆಪಿ ಸರ್ಕಾರ ಜನರ ಗಮನವನ್ನು ತನ್ನ ವೈಫಲ್ಯಗಳಿಂದ ಬೇರೆಡೆಗೆ ತಿರುಗಿಸುತ್ತಿದೆ ಮಾತ್ರವಲ್ಲದೆ ಯುವಜನಾಂಗವನ್ನು ಮತ್ತು ವಿದ್ಯಾರ್ಥಿಗಳನ್ನು ನಿಗ್ರಹಿಸುವ ಕೆಲಸ ಮಾಡುತ್ತಿದೆ. ಮೋದಿ ಸರ್ಕಾರದ ಅಂತ್ಯ ಆರಂಭವಾಗಿದೆ ಎಂದಿದ್ದರು.

ಸೋನಿಯಾ ಗಾಂಧಿ ಹೇಳಿಕೆ ಬೇಜವಾಬ್ದಾರಿಯಿಂದ ಮತ್ತು ರಾಜಕೀಯ ಲಾಭದ ಉದ್ದೇಶವನ್ನು ಹೊಂದಿದೆ. ಅವರ ಮಾತು ದೇಶಾದ್ಯಂತ ಅಶಾಂತಿಯನ್ನು ಹರಡುತ್ತದೆ. ಪ್ರತಿಪಕ್ಷದ ಸ್ಥಾನದಲ್ಲಿದ್ದುಕೊಂಡು ಶಾಂತಿ ಮತ್ತು ಸೌಹಾರ್ಧವನ್ನು ಕಾಪಾಡಲು ಅವರು ಮುಂದಾಗಬೇಕಿತ್ತು. ಆದರೇ ಹಿಂಸಾಚಾರಕ್ಕೆ ಪ್ರಚೋದಿಸುತ್ತಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಉಭಯ ಸದನಗಳು ಕೂಡ ಅಂಗಿಕರಿಸಿವೆ ಎಂಬುದನ್ನು ಮೊದಲು ಕಾಂಗ್ರೆಸ್ ನೆನಪಿನಲ್ಲಿಡಬೇಕು ಎಂದು ಹೇಳಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com