ಎನ್ಆರ್‌ಸಿ, ಎನ್‌ಪಿಆರ್ ತಕ್ಷಣ ಹಿಂಪಡೆಯಿರಿ: ಸಿಪಿಐಎಂ ಪಾಲಿಟ್‌ ಬ್ಯೂರೊ

ಭಾರತ ಸರಕಾರ ಕೂಡಲೇ ರಾಷ್ಟ್ರೀಯ ಪೌರರ ನೋಂದಣಿ (ಎನ್‌ಸಿಆರ್) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ(ಎನ್‌ಪಿಆರ್) ಪ್ರಕ್ರಿಯೆಯನ್ನು ಹಿಂಪಡೆದುಕೊಳ್ಳಬೇಕು ಎಂದು ಸಿಪಿಐ(ಎಂ) ಪಾಲಿಟ್‌ ಬ್ಯುರೊ ಒತ್ತಾಯಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಭಾರತ ಸರಕಾರ ಕೂಡಲೇ ರಾಷ್ಟ್ರೀಯ ಪೌರರ ನೋಂದಣಿ (ಎನ್‌ಸಿಆರ್) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ(ಎನ್‌ಪಿಆರ್) ಪ್ರಕ್ರಿಯೆಯನ್ನು ಹಿಂಪಡೆದುಕೊಳ್ಳಬೇಕು ಎಂದು ಸಿಪಿಐ(ಎಂ) ಪಾಲಿಟ್‌ ಬ್ಯುರೊ ಒತ್ತಾಯಿಸಿದೆ.


ಈಶಾನ್ಯ ರಾಜ್ಯಗಳು ಮಾತ್ರವಲ್ಲ ಇನ್ನೂ ಹತ್ತು ರಾಜ್ಯಗಳ ಮುಖ್ಯಮಂತ್ರಿಗಳು ತಮ್ಮ ರಾಜ್ಯಗಳಲ್ಲಿ ಎನ್‌ಆರ್‌ಸಿ ಜಾರಿ ಮಾಡುವುದನ್ನು ವಿರೋಧಿಸಿದ್ದಾರೆ. ಇನ್ನೂ ಹಲವರು ಇದೇ ದಾರಿ ಅನುಸರಿಸುವ ಸಾಧ್ಯತೆಗಳಿವೆ. ಇಂತಹ ಸನ್ನಿವೇಶದಲ್ಲಿ ಕೇಂದ್ರ ಸರಕಾರದ ಹಠಮಾರಿತನವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಸಿಪಿಐ(ಎಂ) ಹೇಳಿಕೆಯಲ್ಲಿ ತಿಳಿಸಿದೆ.


ಎನ್ಆರ್‌ಸಿ, ಸಿಎಎ ಸಂವಿಧಾನ-ವಿರೋಧಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಮತ್ತು ಅದಕ್ಕೆ ಸಂಬಂಧಿಸಿರುವ ಎನ್‌ ಆರ್‌ ಸಿ/ಎನ್‌ ಪಿ ಆರ್ ವಿರುದ್ಧ ಪ್ರತಿಭಟನೆಗಳನ್ನು ಶಾಂತಿಯುತವಾಗಿ ಮುಂದುವರೆಸಬೇಕು ಎಂದು ಪಾಲಿಟ್‌ ಬ್ಯುರೊ ಜನತೆಗೆ ಮನವಿ ಮಾಡಿಕೊಂಡಿದೆ. 


ಹಲವೆಡೆಗಳಲ್ಲಿ ಪ್ರತಿಭಟನೆಗಳ ನಿಷೇಧ ಮತ್ತು ಶಾಂತಿಯುತ ಪ್ರತಿಭಟನಕಾರರ ಮೇಲೆ ವಿಪರೀತ ಬಲ ಪ್ರಯೋಗವನ್ನು ಪಾಲಿಟ್‌ ಬ್ಯುರೊ ಖಂಡಿಸಿದೆ. ಹಿಂಸಾಚಾರವನ್ನು ಉದ್ರೇಕಿಸುವ ಉದ್ದೇಶ ಹೊಂದಿರುವ ಯಾವುದೇ ತಂತ್ರಗಳಿಗೆ ಜನ ಬಲಿಬೀಳಬಾರದು ಎಂದು ಸಿಪಿಐ(ಎಂ) ಪಾಲಿಟ್‌ ಬ್ಯುರೊ ಜನತೆಗೆ ಮನವಿ ಮಾಡಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com