ಹರ್ಯಾಣ: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ವಿರೋಧಿಸುವವರನ್ನು ಒಂದು ಗಂಟೆಯೊಳಗೆ ಮುಗಿಸಬಹುದು ಎಂದು ಬಿಜೆಪಿ ಶಾಸಕರೊಬ್ಬರು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕೈಥಾಲ್ ಶಾಸಕ ಲೀಲಾ ರಾಮ್ ಗುರ್ಜಾರ್ ಈ ರೀತಿಯ ಹೇಳಿಕೆ ನೀಡಿದ್ದಾರೆ.
ಇಂದಿನ ಭಾರತ ಜವಹರಲ್ ಲಾಲ್ ನೆಹರು ಮತ್ತು ಗಾಂಧಿಯದಲ್ಲಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರದ್ದಾಗಿದೆ ಎಂದು ಅವರು ಹೇಳಿದ್ದಾರೆ.
ಶಾಸಕ ಲೀಲಾ ರಾಮ್ ಗುರ್ಜಾರ್ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗಿದೆ.
Advertisement