ಬಾಂಗ್ಲಾದೇಶಿ ವಲಸಿಗರು ಭಾರತದೊಳಗೆ ನುಗ್ಗುತ್ತಿರುವ ವಿಡಿಯೋ ಹಂಚಿಕೊಂಡ ತ್ರಿಪುರಾ ರಾಜವಂಶಸ್ಥ!

ಬಾಂಗ್ಲಾದೇಶಿ ವಲಸಿಗರು ಭಾರತದೊಳಗೆ ನುಗ್ಗುತ್ತಿರುವ ವಿಡಿಯೋವನ್ನು ತ್ರಿಪುರಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ, ಅಲ್ಲಿನ ರಾಜವಂಶಸ್ಥ ಪ್ರದ್ಯೋತ್ ಮಾಣಿಕ್ಯ ದೆಬ್ಬರ್ಮ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. 
ಬಾಂಗ್ಲಾದೇಶಿ ವಲಸಿಗರು ಭಾರತದೊಳಗೆ ನುಗ್ಗುತ್ತಿರುವ ವಿಡಿಯೋ ವೈರಲ್!
ಬಾಂಗ್ಲಾದೇಶಿ ವಲಸಿಗರು ಭಾರತದೊಳಗೆ ನುಗ್ಗುತ್ತಿರುವ ವಿಡಿಯೋ ವೈರಲ್!
Updated on

ಬಾಂಗ್ಲಾದೇಶಿ ವಲಸಿಗರು ಭಾರತದೊಳಗೆ ನುಗ್ಗುತ್ತಿರುವ ವಿಡಿಯೋವನ್ನು ತ್ರಿಪುರಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ, ಅಲ್ಲಿನ ರಾಜವಂಶಸ್ಥ ಪ್ರದ್ಯೋತ್ ಮಾಣಿಕ್ಯ ದೆಬ್ಬರ್ಮ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. 
   
ಹೆಲೋ ಇಂಡಿಯಾ, ನಮ್ಮ ಗಡಿಗಳು ಹೀಗಿವೆ. ಈ ಬಾಂಗ್ಲಾದೇಶಿಗಳು ಒಳ ನುಗ್ಗುತ್ತಿದ್ದಾರೆ. ಲೊಕೇಶನ್ ತ್ರಿಪುರಾ, ಸಿಮ್ನಾ, ಇಂಡಿಯಾ ಡಲ್ಡಾಲಿ ಗ್ರಾಮ. ಐಎಲ್ ಪಿ ಅವರನ್ನು ತಡೆಗಟ್ಟುತ್ತದೆ ಎಂದು ನಿಮಗನ್ನಿಸುತ್ತದೆಯೇ? ಎಂದು ದೆಬ್ಬರ್ಮ ಪ್ರಶ್ನಿಸಿದ್ದಾರೆ. 

ಭತ್ತದ ಗದ್ದೆಯ ಮೂಲಕ ಬಾಂಗ್ಲಾ ಅಕ್ರಮ ವಲಸಿಗರು ತ್ರಿಪುರಾ ಪ್ರವೇಶಿಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ. ದೆಬ್ಬರ್ಮ ಹೇಳುವ ಪ್ರಕಾರ ಈ ಅಕ್ರಮ ವಲಸಿಗರ ಒಳನುಸುಳುವಿಕೆ ಡಿ.26 ರಂದು ನಡೆದಿದೆ.  ಅವರ ಭಾಷೆ ಅವರ ಉಡುಪುಗಳು ಅವರು ನಿರ್ದಿಷ್ಟ ಧರ್ಮಕ್ಕೆ ಸೆರಿದವರಾಗಿದ್ದಾರಾ ಎಂಬ ವ್ಯತ್ಯಾಸವನ್ನು ಗುರುತಿಸುವುದಕ್ಕೆ ಸಾಧ್ಯವಿಲ್ಲದಂತಿದೆ. ತ್ರಿಪುರಾದ ರಾಜವಂಶಸ್ಥರೂ, ಕಾಂಗ್ರೆಸ್ ನ ಮಾಜಿ ರಾಜ್ಯಾಧ್ಯಕ್ಷರೂ ಆಗಿರುವ ದೆಬ್ಬರ್ಮ ಸಿಎಎ ವಿರುದ್ಧ ಧ್ವನಿ ಎತ್ತಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com