ಹಣ ವರ್ಗಾವಣೆ ಪ್ರಕರಣ : ಫೆ.16ರವರೆಗೂ ರಾಬರ್ಟ್ ವಾದ್ರಾಗೆ ಮಧ್ಯಂತರ ಜಾಮೀನು ಮಂಜೂರು

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿರುವ ರಾಬರ್ಟ್ ವಾದ್ರಾ ಅವರಿಗೆ ಫೆಬ್ರವರಿ 16 ರವರೆಗೂ ದೆಹಲಿ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ರಾಬರ್ಟ್ ವಾದ್ರಾ
ರಾಬರ್ಟ್ ವಾದ್ರಾ
Updated on

ನವದೆಹಲಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ  ಜಾರಿ ನಿರ್ದೇಶನಾಲಯ  ಪ್ರಕರಣ ದಾಖಲಿಸಿರುವ ರಾಬರ್ಟ್ ವಾದ್ರಾ ಅವರಿಗೆ ಫೆಬ್ರವರಿ 16 ರವರೆಗೂ ದೆಹಲಿ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಫೆಬ್ರವರಿ 6 ರಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿ ವಿಚಾರಣೆ ಎದುರಿಸುವಂತೆ  ವಿಶೇಷ ನ್ಯಾಯಾಧೀಶ  ಅರವಿಂದ್ ಕುಮಾರ್ ,  ರಾಬರ್ಟ್ ವಾದ್ರಾ ಅವರಿಗೆ ಆದೇಶಿಸಿದ್ದಾರೆ.

ಲಂಡನ್ ನ ಬ್ರೈಯಾನ್ ಸ್ಟಾನ್ ಸ್ಕ್ವೇರ್ ನಲ್ಲಿ  ಸುಮಾರು 1.9 ಮಿಲಿಯನ್ ಪೌಂಡ್ ವೆಚ್ಚದಲ್ಲಿ ಆಸ್ತಿ ಖರೀದಿಯಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪ ರಾಬರ್ಟ್ ವಾದ್ರಾ ವಿರುದ್ಧ ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ  ಜಾರಿ ನಿರ್ದೇಶನಾಲಯವೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಬಾವಾ ಆಗಿರುವ ರಾಬರ್ಟ್ ವಾದ್ರಾ ವಿರುದ್ಧ  ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com