ಪಾಟ್ನಾ: ಬಿಹಾರದಲ್ಲಿ ಹಳಿ ತಪ್ಪಿದ ಸೀಮಾಂಚಲ ಎಕ್ಸ್ ಪ್ರೆಸ್ ರೈಲು ದುರಂತಕ್ಕೆ ಸಂಬಂಧಿಸಿದಂತೆ ಭಾರತೀಯ ರೈಲ್ವೇ ಇಲಾಖೆ ಪ್ರಯಾಣಿಕರ ಅನುಕೂಲಕ್ಕಾಗಿ ಸಹಾಯವಾಣಿಗಳನ್ನು ತೆರೆದಿದೆ.
ಇಂದು ಬೆಳಗ್ಗೆಯಿಂದಲೇ ಭಾರತೀಯ ರೈಲ್ವೇ ಇಲಾಖೆ ಸಹಾಯವಾಣಿ ಆರಂಭಿಸಿದ್ದು, ಸೋನಾಪುರ, ಹಾಜಿಪುರ ಮತ್ತು ಬರೌನಿಯಲ್ಲಿ ಸಹಾಯವಾಣಿಗಳನ್ನು ಆರಂಭಿಸಿದೆ. ಸೀಮಾಂಚಲ ಎಕ್ಸ್ ಪ್ರೆಸ್ ರೈಲಿನ ಪ್ರಯಾಣಿಕರ ಕುರಿತ ಮಾಹಿತಿಗಳನ್ನು ಅವರ ಪೋಷಕರು ಈ ಸಹಾಯವಾಣಿಗಳ ಮುಖಾಂತರ ಪಡೆಯಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.