ಕೋಲ್ಕತಾ ಪೊಲೀಸ್ ಕಮಿಷನರ್ ರಾಜೀವ್ ಕುಮಾರ್ ಮನೆಗೆ ಸಿಬಿಐ ಅಧಿಕಾರಿಗಳು ಮುತ್ತಿಗೆ ಹಾಕಿದ ನಂತರ ಕೊಲ್ಕತಾದಲ್ಲಿ ನಡೆಯುತ್ತಿರುವ ಹೈಡ್ರಾಮಕ್ಕೆ ಹೊಸ ತಿರುವು ಸಿಕ್ಕಿದ್ದು, ಸಿಬಿಐಗೆ ತಿರುಗು ಬಾಣ ಹೂಡಿರುವ ಪಶ್ಚಿಮ ಬಂಗಾಳ ಪೊಲೀಸರು ಕೊಲ್ಕತಾದ ಸಿಬಿಐ ಮುಖ್ಯಸ್ಥ ಪಂಕಜ್ ಕುಮಾರ್ ಶ್ರೀವಾಸ್ತವ್ ಅವರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. 2018ರಲ್ಲಿ ಇಬ್ಬರು ಉದ್ಯಮಿಗಳನ್ನು ಅನಧಿಕೃತವಾಗಿ ವಶದಲ್ಲಿಟ್ಟುಕೊಂಡಿದ್ದ ಮತ್ತು ಕಟ್ಟಿಹಾಕಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಶ್ರೀವಾಸ್ತವ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.